<p><strong>ಚನ್ನಮ್ಮನ ಕಿತ್ತೂರು:</strong> ತಾಲ್ಲೂಕಿನ ಹೂಲಿಕಟ್ಟಿ ಗ್ರಾಮದ 14 ಎಕರೆ ವಿಸ್ತೀರ್ಣದ ಸಣ್ಣ ಕೆರೆ ನೀರಿನ ಪ್ರವಾಹಕ್ಕೆ ಒಡೆದು ಭೀಕರ ಹಾನಿಯಾಗಿದೆ.</p>.<p>ರೈತರ ಕಬ್ಬು, ಭತ್ತ, ಗೋವಿನಜೋಳ ಸೇರಿದಂತೆ ವಿವಿಧ 150 ಎಕರೆ ಬೆಳೆ ಸಂಪೂರ್ಣ ನಾಶವಾಗಿದೆ. ಅಲ್ಲದೇ ದನ–ಕರುಗಳು ನೀರಿನಲ್ಲಿ ಸಿಲುಕಿ ಯಾತನೆ ಅನುಭವಿಸುತ್ತಿವೆ. ರೈತರು ತೀವ್ರ ಆತಂಕಗೊಂಡಿದ್ದಾರೆ. ಹೂಲಿಕಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳು ಕೊಚ್ಚಿ ಹೋಗಿವೆ. ಗ್ರಾಮಸ್ಥರು ಪರದಾಡು ಸ್ಥಿತಿ ನಿರ್ಮಾಣವಾಗಿದೆ.</p>.<p>ತಾಲ್ಲೂಕಿನ ಖೋದಾನಪುರ ಗ್ರಾಮದಲ್ಲಿ ಮಳೆಯ ರುದ್ರಾವತಾರಕ್ಕೆ 30ಕ್ಕೂ ಹೆಚ್ಚೂ ಮನೆಗಳು ಭಾಗಶಃ ಕುಸಿದಿವೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಗ್ರಾಮಸ್ಥರು ಆಂತಕದಲ್ಲಿ ಜೀವ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಕಿತ್ತೂರಿನಿಂದ ಅಳ್ನಾವರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪರ್ಕ ಕಂಡಿತಗೊಂಡಿದೆ. ಸಮೀಪದ ಪರಸನಟ್ಟಿ ಕೆರೆ ತುಂಬಿದ ಪರಿಣಾಮ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಹೀಗಾಗಿ, ರಸ್ತೆ ಅಲ್ಲಲ್ಲಿ ಕೊಚ್ಚಿಹೋಗಿದೆ. ಸಂಚಾರ ಸಂಪೂರ್ಣ ಬಂದ್ ಆಗಿದೆ.</p>.<p>ಬೈಲಹೊಂಗಲ ಅವರಾದಿ ಕಿತ್ತೂರು ಮಾರ್ಗದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಖೋದಾನಪುರ ಜಮಳೂರ ಗ್ರಾಮದ ನಡುವೆ ಗೂಡ್ಸ್ ವಾಹನ ಬರಮಬಾವಿಹಳ್ಳದಲ್ಲಿ ಕೊಚ್ಚಿ ಹೋಗಿದೆ. ವಾಹನದಲ್ಲಿದ್ದ ಚಾಲಕನನ್ನು ಗ್ರಾಮಸ್ಥರು ಕಾಪಾಡಿದ್ದಾರೆ. ಈ ರಸ್ತೆಯನ್ನೂ ಬಂದ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ತಾಲ್ಲೂಕಿನ ಹೂಲಿಕಟ್ಟಿ ಗ್ರಾಮದ 14 ಎಕರೆ ವಿಸ್ತೀರ್ಣದ ಸಣ್ಣ ಕೆರೆ ನೀರಿನ ಪ್ರವಾಹಕ್ಕೆ ಒಡೆದು ಭೀಕರ ಹಾನಿಯಾಗಿದೆ.</p>.<p>ರೈತರ ಕಬ್ಬು, ಭತ್ತ, ಗೋವಿನಜೋಳ ಸೇರಿದಂತೆ ವಿವಿಧ 150 ಎಕರೆ ಬೆಳೆ ಸಂಪೂರ್ಣ ನಾಶವಾಗಿದೆ. ಅಲ್ಲದೇ ದನ–ಕರುಗಳು ನೀರಿನಲ್ಲಿ ಸಿಲುಕಿ ಯಾತನೆ ಅನುಭವಿಸುತ್ತಿವೆ. ರೈತರು ತೀವ್ರ ಆತಂಕಗೊಂಡಿದ್ದಾರೆ. ಹೂಲಿಕಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳು ಕೊಚ್ಚಿ ಹೋಗಿವೆ. ಗ್ರಾಮಸ್ಥರು ಪರದಾಡು ಸ್ಥಿತಿ ನಿರ್ಮಾಣವಾಗಿದೆ.</p>.<p>ತಾಲ್ಲೂಕಿನ ಖೋದಾನಪುರ ಗ್ರಾಮದಲ್ಲಿ ಮಳೆಯ ರುದ್ರಾವತಾರಕ್ಕೆ 30ಕ್ಕೂ ಹೆಚ್ಚೂ ಮನೆಗಳು ಭಾಗಶಃ ಕುಸಿದಿವೆ. ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಗ್ರಾಮಸ್ಥರು ಆಂತಕದಲ್ಲಿ ಜೀವ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಕಿತ್ತೂರಿನಿಂದ ಅಳ್ನಾವರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪರ್ಕ ಕಂಡಿತಗೊಂಡಿದೆ. ಸಮೀಪದ ಪರಸನಟ್ಟಿ ಕೆರೆ ತುಂಬಿದ ಪರಿಣಾಮ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಹೀಗಾಗಿ, ರಸ್ತೆ ಅಲ್ಲಲ್ಲಿ ಕೊಚ್ಚಿಹೋಗಿದೆ. ಸಂಚಾರ ಸಂಪೂರ್ಣ ಬಂದ್ ಆಗಿದೆ.</p>.<p>ಬೈಲಹೊಂಗಲ ಅವರಾದಿ ಕಿತ್ತೂರು ಮಾರ್ಗದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಖೋದಾನಪುರ ಜಮಳೂರ ಗ್ರಾಮದ ನಡುವೆ ಗೂಡ್ಸ್ ವಾಹನ ಬರಮಬಾವಿಹಳ್ಳದಲ್ಲಿ ಕೊಚ್ಚಿ ಹೋಗಿದೆ. ವಾಹನದಲ್ಲಿದ್ದ ಚಾಲಕನನ್ನು ಗ್ರಾಮಸ್ಥರು ಕಾಪಾಡಿದ್ದಾರೆ. ಈ ರಸ್ತೆಯನ್ನೂ ಬಂದ್ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>