<p><strong>ಬೆಳಗಾವಿ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ವರುಣನ ಅಬ್ಬರ ತಗ್ಗಿದೆ. ಆದರೆ, ಸಪ್ತ ನದಿಗಳಿಗೆ ಹರಿದುಬರುವ ನೀರು ನಿಂತಿಲ್ಲ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಮತ್ತು ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಕಡಿಮೆಯಾಗಿಲ್ಲ.</p>.<p>ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ, ಕೃಷ್ಣಾ ಮತ್ತು ಅದರ ಉಪನದಿಗಳು ಮೈದುಂಬಿಕೊಂಡು ಹರಿಯುತ್ತಿವೆ.</p>.<p>ಬೆಳಗಾವಿ ನಗರದಲ್ಲಿ ಆಗಾಗ ತುಂತುರು ಮಳೆ ಸುರಿಯುತ್ತಿದ್ದು, ಬಸವನ ಕುಡಚಿಯಲ್ಲಿ ಒಂದು ಮರ ಬಿದ್ದಿದೆ.</p>.<p>ಸತತ ಮಳೆಯಿಂದ ನಗರದ ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ–ವಹಿವಾಟಿಗೆ ತೊಡಕಾಗಿತ್ತು. ಆದರೆ, ಗುರುವಾರ ಮಳೆ ಕಡಿಮೆಯಾದ ಕಾರಣ ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚಿತ್ತು. ಜನರು ಅಗತ್ಯ ದಿನಸಿ ವಸ್ತುಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.</p>.<p>ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಇವೆಲ್ಲ ಮತ್ತೆ ಆರಂಭವಾಗಲಿವೆ.</p>.<p>ನವಿಲುತೀರ್ಥ ಜಲಾಶಯದಲ್ಲಿ ಜೂನ್ 25ರಂದು 7,014 ಕ್ಯೂಸೆಕ್ ಒಳಹರಿವು ಇತ್ತು. ಜೂನ್ 26ರಂದು ಅದು 10,999 ಕ್ಯೂಸೆಕ್ಗೆ ಏರಿಕೆಯಾಗಿದೆ. ಹಿಡಕಲ್ ಜಲಾಶಯದ ಒಳಹರಿವಿನ ಪ್ರಮಾಣ 26,420 ಕ್ಯೂಸೆಕ್ನಿಂದ 30,300 ಕ್ಯೂಸೆಕ್ಗೆ ಹೆಚ್ಚಿದೆ.</p>.<p>ಸತತ ಮಳೆಯಿಂದ ಗೋಕಾಕ ಜಲಪಾತ, ಗೊಡಚಿನಮಲ್ಕಿ ಜಲಪಾತ ಮೈದುಂಬಿಕೊಂಡು ಹರಿಯುತ್ತಿದ್ದು, ಅವುಗಳ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ.</p>.<p>ಆದರೆ, ಗೊಡಚಿನಮಲ್ಕಿ ಜಲಪಾತದಲ್ಲಿ ಫೋಟೊ, ಸೆಲ್ಫಿಗಾಗಿ ಯುವಜನರು ಅಪಾಯವನ್ನೂ ಲೆಕ್ಕಿಸದೆ ನೀರು ಹರಿಯುವ ಸ್ಥಳದ ಸಮೀಪವೇ ಹೋಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರ ವರುಣನ ಅಬ್ಬರ ತಗ್ಗಿದೆ. ಆದರೆ, ಸಪ್ತ ನದಿಗಳಿಗೆ ಹರಿದುಬರುವ ನೀರು ನಿಂತಿಲ್ಲ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಮತ್ತು ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಕಡಿಮೆಯಾಗಿಲ್ಲ.</p>.<p>ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದ ಕಾರಣ, ಕೃಷ್ಣಾ ಮತ್ತು ಅದರ ಉಪನದಿಗಳು ಮೈದುಂಬಿಕೊಂಡು ಹರಿಯುತ್ತಿವೆ.</p>.<p>ಬೆಳಗಾವಿ ನಗರದಲ್ಲಿ ಆಗಾಗ ತುಂತುರು ಮಳೆ ಸುರಿಯುತ್ತಿದ್ದು, ಬಸವನ ಕುಡಚಿಯಲ್ಲಿ ಒಂದು ಮರ ಬಿದ್ದಿದೆ.</p>.<p>ಸತತ ಮಳೆಯಿಂದ ನಗರದ ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರ–ವಹಿವಾಟಿಗೆ ತೊಡಕಾಗಿತ್ತು. ಆದರೆ, ಗುರುವಾರ ಮಳೆ ಕಡಿಮೆಯಾದ ಕಾರಣ ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚಿತ್ತು. ಜನರು ಅಗತ್ಯ ದಿನಸಿ ವಸ್ತುಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.</p>.<p>ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಇವೆಲ್ಲ ಮತ್ತೆ ಆರಂಭವಾಗಲಿವೆ.</p>.<p>ನವಿಲುತೀರ್ಥ ಜಲಾಶಯದಲ್ಲಿ ಜೂನ್ 25ರಂದು 7,014 ಕ್ಯೂಸೆಕ್ ಒಳಹರಿವು ಇತ್ತು. ಜೂನ್ 26ರಂದು ಅದು 10,999 ಕ್ಯೂಸೆಕ್ಗೆ ಏರಿಕೆಯಾಗಿದೆ. ಹಿಡಕಲ್ ಜಲಾಶಯದ ಒಳಹರಿವಿನ ಪ್ರಮಾಣ 26,420 ಕ್ಯೂಸೆಕ್ನಿಂದ 30,300 ಕ್ಯೂಸೆಕ್ಗೆ ಹೆಚ್ಚಿದೆ.</p>.<p>ಸತತ ಮಳೆಯಿಂದ ಗೋಕಾಕ ಜಲಪಾತ, ಗೊಡಚಿನಮಲ್ಕಿ ಜಲಪಾತ ಮೈದುಂಬಿಕೊಂಡು ಹರಿಯುತ್ತಿದ್ದು, ಅವುಗಳ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ.</p>.<p>ಆದರೆ, ಗೊಡಚಿನಮಲ್ಕಿ ಜಲಪಾತದಲ್ಲಿ ಫೋಟೊ, ಸೆಲ್ಫಿಗಾಗಿ ಯುವಜನರು ಅಪಾಯವನ್ನೂ ಲೆಕ್ಕಿಸದೆ ನೀರು ಹರಿಯುವ ಸ್ಥಳದ ಸಮೀಪವೇ ಹೋಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>