ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯ ರಭಸ ಕಡಿಮೆಯಾಗಿದೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ, ಎಂ.ಕೆ. ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ರಭಸ ಕಡಿಮೆಯಾಗಿದೆ.
ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು, ಅಲ್ಲಿಂದ ಅಪಾರ ಪ್ರಮಾಣದ ನೀರು ಕೃಷ್ಣಾ ಹಾಗೂ ಉಪನದಿಗಳಾದ ದೂಧ್ಗಂಗಾ, ವೇದಗಂಗಾಗೆ ಹರಿದುಬರುತ್ತಿದೆ. ಆ ರಾಜ್ಯದ ರಾಜಾಪುರ ಬ್ಯಾರೇಜ್ ಮೂಲಕ 61,310 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ.
ಜಲಾವೃತವಾಗಿರುವ ಚಿಕ್ಕೋಡಿಯ 6, ಖಾನಾಪುರ, ಗೋಕಾಕ ಹಾಗೂ ಬೈಲಹೊಂಗಲದ ತಲಾ ಒಂದೊಂದು ಸೇತುವೆಗಳು ಯಥಾಸ್ಥಿತಿಯಲ್ಲಿವೆ.