<p><strong>ಬೆಳಗಾವಿ: </strong>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್ಸಿಯು)ದಿಂದ ಈ ಸಾಲಿನಲ್ಲಿ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಪಂಡಿತ್ ರಾಜೀವ್ ತಾರಾನಾಥ್, ಡಾ.ಎಚ್. ಸುದರ್ಶನ್ ಬಲ್ಲಾಳ್ ಹಾಗೂ ವಾದಿರಾಜ ಬಿ.ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು.</p>.<p>'ಮಾರ್ಚ್ 9ರಂದು ಬೆಳಿಗ್ಗೆ 11ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯುವ 9ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು' ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>'ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಜ್ಞಾನಿ ಹಾಗೂ ನ್ಯಾಕ್ ಅಧ್ಯಕ್ಷ ಪ್ರೊ.ವೀರೇಂದ್ರ ಸಿಂಗ್ ಚವ್ಹಾಣ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ' ಎಂದು ತಿಳಿಸಿದರು.</p>.<p>'35,484 ಸ್ನಾತಕ ವಿದ್ಯಾರ್ಥಿಗಳು ಹಾಗೂ 2,739 ಸ್ನಾತಕೋತ್ತರ, 188 ಪಿ.ಜಿ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 10 ವಿದ್ಯಾರ್ಥಿಗಳು/ ವಿದ್ಯಾರ್ಥಿನಿಯರಿಗೆ ಸುವರ್ಣ ಪದಕಗಳನ್ನು ಹಾಗೂ 86 ಪಿಎಚ್.ಡಿಗಳನ್ನು ಪ್ರದಾನ ಮಾಡಲಾಗುವುದು' ಎಂದು ವಿವರ ನೀಡಿದರು.</p>.<p>ಕುಲಸಚಿವರಾದ ಪ್ರೊ.ವೀರನಗೌಡ ಪಾಟೀಲ ಹಾಗೂ ಪ್ರೊ.ಬಸವರಾಜ ಪದ್ಮಶಾಲಿ ಮತ್ತು ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್ಸಿಯು)ದಿಂದ ಈ ಸಾಲಿನಲ್ಲಿ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಪಂಡಿತ್ ರಾಜೀವ್ ತಾರಾನಾಥ್, ಡಾ.ಎಚ್. ಸುದರ್ಶನ್ ಬಲ್ಲಾಳ್ ಹಾಗೂ ವಾದಿರಾಜ ಬಿ.ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು.</p>.<p>'ಮಾರ್ಚ್ 9ರಂದು ಬೆಳಿಗ್ಗೆ 11ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯುವ 9ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು' ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>'ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಜ್ಞಾನಿ ಹಾಗೂ ನ್ಯಾಕ್ ಅಧ್ಯಕ್ಷ ಪ್ರೊ.ವೀರೇಂದ್ರ ಸಿಂಗ್ ಚವ್ಹಾಣ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ' ಎಂದು ತಿಳಿಸಿದರು.</p>.<p>'35,484 ಸ್ನಾತಕ ವಿದ್ಯಾರ್ಥಿಗಳು ಹಾಗೂ 2,739 ಸ್ನಾತಕೋತ್ತರ, 188 ಪಿ.ಜಿ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. 10 ವಿದ್ಯಾರ್ಥಿಗಳು/ ವಿದ್ಯಾರ್ಥಿನಿಯರಿಗೆ ಸುವರ್ಣ ಪದಕಗಳನ್ನು ಹಾಗೂ 86 ಪಿಎಚ್.ಡಿಗಳನ್ನು ಪ್ರದಾನ ಮಾಡಲಾಗುವುದು' ಎಂದು ವಿವರ ನೀಡಿದರು.</p>.<p>ಕುಲಸಚಿವರಾದ ಪ್ರೊ.ವೀರನಗೌಡ ಪಾಟೀಲ ಹಾಗೂ ಪ್ರೊ.ಬಸವರಾಜ ಪದ್ಮಶಾಲಿ ಮತ್ತು ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. ಪಾಟೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>