<p><strong>ಕಾಗವಾಡ</strong>: ‘ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ಏಕೆ ಮೋದಿ...ಮೋದಿ... ಎಂದು ಕೂಗುತ್ತೀರಿ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹರಿಹಾಯ್ದರು.</p>.<p>ತಾಲ್ಲೂಕಿನ ಮದಬಾವಿಯಲ್ಲಿ ಮಂಗಳವಾರ ರಾತ್ರಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಯುವಜನರು ಮೋದಿ ಮೋದಿ... ಎನ್ನುತ್ತಾರೆ. ಮೋದಿಯನ್ನು ತೊಗೊಂಡು ನೆಕ್ಕುತ್ತೀರಾ’ ಎಂದೂ ಪ್ರಶ್ನಿಸಿದರು.</p>.<p>‘ನಾನೂ ಪದವೀಧರ. ನಾನೂ ಸಹ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೇಕು, ದೇಶಕ್ಕೆ ಮೋದಿ ಬೇಕು ಎನ್ನುತ್ತಾರೆ. ಮೋದಿ ಇಲ್ಲಿ ಬಂದು ನಿಮ್ಮ ಸಮಸ್ಯೆ ಆಲಿಸುತ್ತಾರೆಯೇ? ಇಲ್ಲಿ ನಿಮಗೆ ಸಮಸ್ಯೆಯಾದರೆ ಸ್ಪಂದಿಸುವುದು ನಾನೇ’ ಎಂದರು.</p>.<p>‘ಉದ್ಯೋಗ ಸೃಷ್ಟಿಸುವುದಾಗಿ ಮೋದಿ 10 ವರ್ಷಗಳಿಂದ ಹೇಳುತ್ತಿದ್ದಾರೆ. ಲಕ್ಷಾಂತರ ಯುವಜನರು ಪದವಿ ಪಡೆದೂ ನಿರುದ್ಯೋಗಿ ಆಗಿದ್ದಾರೆ. ಉದ್ಯೋಗ ಕೊಡಿ ಎಂದು ಮೋದಿ ಅವರಿಗೆ ಕೇಳಿದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ. ಆದರೂ ಯುವಕರು ಮೋದಿ...ಮೋದಿ... ಎನ್ನುತ್ತಿದ್ದಾರೆ’ ಎಂದು ಕಿಡಿ ಕಾರಿದರು.</p>.<p><strong>ವಿದ್ಯುತ್ ಸ್ಥಗಿತ: ಕಾಗೆ ಬೆದರಿಕೆ:</strong></p>.<p>ಕಾಗವಾಡ ತಾಲ್ಲೂಕಿನ ಮಂಗಾವತಿ ಮತ್ತು ಜುಗುಳ ಗ್ರಾಮಗಳಲ್ಲಿ ಪ್ರಚಾರ ಮಾಡಿ ಮಾತನಾಡಿದ ಭರಮಗೌಡ (ರಾಜು) ಕಾಗೆ, ‘ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ನಿರೀಕ್ಷಿತ ಮತ ಬರದೇ ಇದ್ದರೆ ನಿಮ್ಮೂರಿನ ವಿದ್ಯುತ್ ಕಡಿತಗೊಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ. ಶಾಸಕರ ಈ ಹೇಳಿಕೆಗಳ ವಿಡಿಯೊ ತುಣುಕುಗಳು ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ</strong>: ‘ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ಏಕೆ ಮೋದಿ...ಮೋದಿ... ಎಂದು ಕೂಗುತ್ತೀರಿ’ ಎಂದು ಶಾಸಕ ಭರಮಗೌಡ (ರಾಜು) ಕಾಗೆ ಹರಿಹಾಯ್ದರು.</p>.<p>ತಾಲ್ಲೂಕಿನ ಮದಬಾವಿಯಲ್ಲಿ ಮಂಗಳವಾರ ರಾತ್ರಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಯುವಜನರು ಮೋದಿ ಮೋದಿ... ಎನ್ನುತ್ತಾರೆ. ಮೋದಿಯನ್ನು ತೊಗೊಂಡು ನೆಕ್ಕುತ್ತೀರಾ’ ಎಂದೂ ಪ್ರಶ್ನಿಸಿದರು.</p>.<p>‘ನಾನೂ ಪದವೀಧರ. ನಾನೂ ಸಹ ಈ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೇಕು, ದೇಶಕ್ಕೆ ಮೋದಿ ಬೇಕು ಎನ್ನುತ್ತಾರೆ. ಮೋದಿ ಇಲ್ಲಿ ಬಂದು ನಿಮ್ಮ ಸಮಸ್ಯೆ ಆಲಿಸುತ್ತಾರೆಯೇ? ಇಲ್ಲಿ ನಿಮಗೆ ಸಮಸ್ಯೆಯಾದರೆ ಸ್ಪಂದಿಸುವುದು ನಾನೇ’ ಎಂದರು.</p>.<p>‘ಉದ್ಯೋಗ ಸೃಷ್ಟಿಸುವುದಾಗಿ ಮೋದಿ 10 ವರ್ಷಗಳಿಂದ ಹೇಳುತ್ತಿದ್ದಾರೆ. ಲಕ್ಷಾಂತರ ಯುವಜನರು ಪದವಿ ಪಡೆದೂ ನಿರುದ್ಯೋಗಿ ಆಗಿದ್ದಾರೆ. ಉದ್ಯೋಗ ಕೊಡಿ ಎಂದು ಮೋದಿ ಅವರಿಗೆ ಕೇಳಿದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ. ಆದರೂ ಯುವಕರು ಮೋದಿ...ಮೋದಿ... ಎನ್ನುತ್ತಿದ್ದಾರೆ’ ಎಂದು ಕಿಡಿ ಕಾರಿದರು.</p>.<p><strong>ವಿದ್ಯುತ್ ಸ್ಥಗಿತ: ಕಾಗೆ ಬೆದರಿಕೆ:</strong></p>.<p>ಕಾಗವಾಡ ತಾಲ್ಲೂಕಿನ ಮಂಗಾವತಿ ಮತ್ತು ಜುಗುಳ ಗ್ರಾಮಗಳಲ್ಲಿ ಪ್ರಚಾರ ಮಾಡಿ ಮಾತನಾಡಿದ ಭರಮಗೌಡ (ರಾಜು) ಕಾಗೆ, ‘ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ನಿರೀಕ್ಷಿತ ಮತ ಬರದೇ ಇದ್ದರೆ ನಿಮ್ಮೂರಿನ ವಿದ್ಯುತ್ ಕಡಿತಗೊಳಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ. ಶಾಸಕರ ಈ ಹೇಳಿಕೆಗಳ ವಿಡಿಯೊ ತುಣುಕುಗಳು ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>