ಕಲಬುರ್ಗಿ: ಜಿಲ್ಲೆಯ ಸೇಡಂ ತಾಲ್ಲೂಕು ಮಳಖೇಡನಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ರಾಷ್ಟ್ರಕೂಟ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಇಲ್ಲಿ ಚಾಲನೆ ನೀಡಿದರು.
ಉತ್ಸವದ ಅಂಗವಾಗಿ ಮಳಖೇಡ ಕೋಟೆಯಿಂದ ಅದ್ಧೂರಿ ಮೆರವಣಿಗೆ ನಡೆಯಿತು.
ಹಲಗೆ ವಾದನ, ಪಟ ಕುಣಿತ, ಡೊಳ್ಳು, ಗಾರುಡಿ ಗೊಂಬೆ ಕಲಾವಿದರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.