<p><strong>ಬೆಳಗಾವಿ:</strong> ಇಲ್ಲಿನ ‘ಚಿತ್ರಾ’ ಹಾಗೂ ‘ಗ್ಲೋಬ್’ ಚಿತ್ರಮಂದಿರಗಳಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಲನಚಿತ್ರ ಪ್ರದರ್ಶನದ ವೇಳೆ ಭಾನುವಾರ ಭೇಟಿ ನೀಡಿದ್ದ ಆ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ, ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ತೆರೆ ಕಂಡಾಗಿನಿಂದಲೂ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವುದು ಹಾಗೂ ಅಭಿಮಾನಿಗಳಿಂದ ಪ್ರೀತಿ ವ್ಯಕ್ತವಾಗಿದ್ದಕ್ಕೆ ಮನಸೋತರು.</p>.<p>ಪ್ರೇಕ್ಷಕರೊಂದಿಗೆ ಕೆಲ ಹೊತ್ತು ಸಿನಿಮಾ ವೀಕ್ಷಿಸಿದ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘400 ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ‘ಅವನೇ ಶ್ರೀಮನ್ನಾರಾಯಣ’ ಚಿತ್ರ, ಮೊದಲ ವಾರವೇ ಹಿಂದಿನ ‘ಕಿರಿಕ್ ಪಾರ್ಟಿ’ ಸಿನಿಮಾಗಿಂತ 4 ಪಟ್ಟು ಹೆಚ್ಚು ವರಮಾನ ಗಳಿಸಿದೆ. ಮಾಸ್ ಪ್ರೇಕ್ಷಕರೊಂದಿಗೆ ಇಡೀ ಕುಟುಂಬವನ್ನು ಚಿತ್ರಮಂದಿರದತ್ತ ಸೆಳೆಯುತ್ತಿದೆ. ಸಿನಿಮಾ ವೀಕ್ಷಿಸಿದವರು ಒಳ್ಳೆಯ ಪ್ರಚಾರ ಮಾಡುತ್ತಿದ್ದಾರೆ. ಇದರಿಂದಲೂ ಅನುಕೂಲವಾಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಿದೆ. ಮುಂದಿನ ವಾರ ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಹೆಚ್ಚು ಖುಷಿ ತಂದಿದೆ’ ಎಂದರು. ನಟರಾದ ಪ್ರಮೋದ ಶೆಟ್ಟಿ ಹಾಗೂ ಬಾಲಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ‘ಚಿತ್ರಾ’ ಹಾಗೂ ‘ಗ್ಲೋಬ್’ ಚಿತ್ರಮಂದಿರಗಳಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಲನಚಿತ್ರ ಪ್ರದರ್ಶನದ ವೇಳೆ ಭಾನುವಾರ ಭೇಟಿ ನೀಡಿದ್ದ ಆ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ, ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ತೆರೆ ಕಂಡಾಗಿನಿಂದಲೂ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವುದು ಹಾಗೂ ಅಭಿಮಾನಿಗಳಿಂದ ಪ್ರೀತಿ ವ್ಯಕ್ತವಾಗಿದ್ದಕ್ಕೆ ಮನಸೋತರು.</p>.<p>ಪ್ರೇಕ್ಷಕರೊಂದಿಗೆ ಕೆಲ ಹೊತ್ತು ಸಿನಿಮಾ ವೀಕ್ಷಿಸಿದ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು.</p>.<p>ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘400 ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ‘ಅವನೇ ಶ್ರೀಮನ್ನಾರಾಯಣ’ ಚಿತ್ರ, ಮೊದಲ ವಾರವೇ ಹಿಂದಿನ ‘ಕಿರಿಕ್ ಪಾರ್ಟಿ’ ಸಿನಿಮಾಗಿಂತ 4 ಪಟ್ಟು ಹೆಚ್ಚು ವರಮಾನ ಗಳಿಸಿದೆ. ಮಾಸ್ ಪ್ರೇಕ್ಷಕರೊಂದಿಗೆ ಇಡೀ ಕುಟುಂಬವನ್ನು ಚಿತ್ರಮಂದಿರದತ್ತ ಸೆಳೆಯುತ್ತಿದೆ. ಸಿನಿಮಾ ವೀಕ್ಷಿಸಿದವರು ಒಳ್ಳೆಯ ಪ್ರಚಾರ ಮಾಡುತ್ತಿದ್ದಾರೆ. ಇದರಿಂದಲೂ ಅನುಕೂಲವಾಗಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಿದೆ. ಮುಂದಿನ ವಾರ ಹಿಂದಿ ಭಾಷೆಯಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಹೆಚ್ಚು ಖುಷಿ ತಂದಿದೆ’ ಎಂದರು. ನಟರಾದ ಪ್ರಮೋದ ಶೆಟ್ಟಿ ಹಾಗೂ ಬಾಲಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>