<p><strong>ಬೆಳಗಾವಿ:</strong> ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವಲ್ಲಿ ಬೆಳಗಾವಿಗರ ಕೊಡುಗೆಯೂ ಸಾಕಷ್ಟಿದೆ. ರಾಮನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜ.22ರಂದು ನಗರದಾದ್ಯಂತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಲಕ್ಷಾಂತರ ಜನರ ತ್ಯಾಗದ ಪರಿಣಾಮವಾಗಿ ನಿರ್ಮಾಣವಾದ ಹೊಸ ರಾಮ ಮಂದಿರ ಈಗ ಉದ್ಘಾಟನೆಯಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಕೊಟ್ಟಿಲ್ಲ ಎಂದರು. ಆಹ್ವಾನ ನೀಡಿದ ನಂತರ, ‘ಈಗ ಹೋಗುವುದಿಲ್ಲ. ಸಮಯ ಸಿಕ್ಕಾಗ ಹೋಗುತ್ತೇವೆ’ ಎನ್ನುತ್ತಿದ್ದಾರೆ. ರಾಮ ಮಂದಿರ ನಿರ್ಮಾಣವಾಗಬಾರದು ಎಂಬುದು ಅವರ ಉದ್ದೇಶವಾಗಿತ್ತು’ ಎಂದು ದೂರಿದರು.</p><p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ‘ಸೆಲ್ಫಿ ವಿಥ್ ರಾಮ’ ಅಭಿಯಾನಕ್ಕೆ ಕರೆಕೊಟ್ಟಿದ್ದಾರೆ. ಹಾಗಾಗಿ ಎಲ್ಲರೂ ರಾಮನ ಭಾವಚಿತ್ರದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಬೇಕು. ಈ ಕಾರ್ಯಕ್ರಮದ ಅಂಗವಾಗಿ ಎರಡು ದಿನ ಭಕ್ತರು ಮಾಂಸಾಹಾರ ಮತ್ತು ಮದ್ಯ ಸೇವಿಸಬಾರದು. ಮದ್ಯದಂಗಡಿ ಹಾಗೂ ಮಾಂಸದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಳಿ ಮನವಿ ಮಾಡುತ್ತೇವೆ’ ಎಂದರು.</p><p>‘ರಾಮನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಕರ್ನಾಟಕದಲ್ಲಿ ಜ.22ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ(ಅರ್ಧ ದಿನ) ರಜೆ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p><p>ಮಾಜಿ ಶಾಸಕ ಸಂಜಯ ಪಾಟೀಲ, ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಇಡೀ ದೇಶದ ಜನರಲ್ಲಿ ಸಂತಸ ಮೂಡಿಸಿದೆ’ ಎಂದರು.</p><p>ಸಂಸದೆ ಮಂಗಲಾ ಅಂಗಡಿ, ಪಕ್ಷದ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುವಲ್ಲಿ ಬೆಳಗಾವಿಗರ ಕೊಡುಗೆಯೂ ಸಾಕಷ್ಟಿದೆ. ರಾಮನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಜ.22ರಂದು ನಗರದಾದ್ಯಂತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಹೇಳಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಲಕ್ಷಾಂತರ ಜನರ ತ್ಯಾಗದ ಪರಿಣಾಮವಾಗಿ ನಿರ್ಮಾಣವಾದ ಹೊಸ ರಾಮ ಮಂದಿರ ಈಗ ಉದ್ಘಾಟನೆಯಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿನ ಕಾರ್ಯಕ್ರಮಕ್ಕೆ ನಮಗೆ ಆಹ್ವಾನ ಕೊಟ್ಟಿಲ್ಲ ಎಂದರು. ಆಹ್ವಾನ ನೀಡಿದ ನಂತರ, ‘ಈಗ ಹೋಗುವುದಿಲ್ಲ. ಸಮಯ ಸಿಕ್ಕಾಗ ಹೋಗುತ್ತೇವೆ’ ಎನ್ನುತ್ತಿದ್ದಾರೆ. ರಾಮ ಮಂದಿರ ನಿರ್ಮಾಣವಾಗಬಾರದು ಎಂಬುದು ಅವರ ಉದ್ದೇಶವಾಗಿತ್ತು’ ಎಂದು ದೂರಿದರು.</p><p>‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ‘ಸೆಲ್ಫಿ ವಿಥ್ ರಾಮ’ ಅಭಿಯಾನಕ್ಕೆ ಕರೆಕೊಟ್ಟಿದ್ದಾರೆ. ಹಾಗಾಗಿ ಎಲ್ಲರೂ ರಾಮನ ಭಾವಚಿತ್ರದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಬೇಕು. ಈ ಕಾರ್ಯಕ್ರಮದ ಅಂಗವಾಗಿ ಎರಡು ದಿನ ಭಕ್ತರು ಮಾಂಸಾಹಾರ ಮತ್ತು ಮದ್ಯ ಸೇವಿಸಬಾರದು. ಮದ್ಯದಂಗಡಿ ಹಾಗೂ ಮಾಂಸದಂಗಡಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಳಿ ಮನವಿ ಮಾಡುತ್ತೇವೆ’ ಎಂದರು.</p><p>‘ರಾಮನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಕರ್ನಾಟಕದಲ್ಲಿ ಜ.22ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ(ಅರ್ಧ ದಿನ) ರಜೆ ಘೋಷಿಸಬೇಕು’ ಎಂದು ಒತ್ತಾಯಿಸಿದರು.</p><p>ಮಾಜಿ ಶಾಸಕ ಸಂಜಯ ಪಾಟೀಲ, ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿರುವುದು ಇಡೀ ದೇಶದ ಜನರಲ್ಲಿ ಸಂತಸ ಮೂಡಿಸಿದೆ’ ಎಂದರು.</p><p>ಸಂಸದೆ ಮಂಗಲಾ ಅಂಗಡಿ, ಪಕ್ಷದ ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>