<p>ರಾಮದುರ್ಗ: ಪಟ್ಟಣದ ತೇರು ಬಜಾರಿನಲ್ಲಿರುವ ಟೌನ್ ಪೋಸ್ಟ್ ಕಚೇರಿಯನ್ನು ಪುನಃ ಆರಂಭಿಸುವ ಭರವಸೆಯನ್ನು ಲಿಖಿತವಾಗಿ ನೀಡಿದ ನಂತರ ಎರಡು ದಿನಗಳಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.</p>.<p>ವಿಜಯ ಸೇನೆಯ ಪದಾಧಿಕಾರಿಗಳು ಮತ್ತು ಫಲಾನುಭವಿಗಳು ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ವಿಭಾಗದ ಇನ್ಸ್ಪೆಕ್ಟರ್ ನಾಗರಾಜ್ ಮಳ್ಳಿ, ದಾವಲಸಾಬ ಅಣ್ಣಿಗೇರಿ ಟೌನ್ ಪೋಸ್ಟ್ ಅನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನ ಮಾಡುವುದಿಲ್ಲ ಎಂದು ಭರವಸೆ ನೀಡಿದರು.</p>.<p>ರಾಮದುರ್ಗದಲ್ಲಿ ವಿಜಯ ಸೇನಾ ಸಮಿತಿಯು ಟೌನ್ ಪೋಸ್ಟ್ ಆಫೀಸ್ ವಿಲೀನ ಮಾಡಬಾರದು ಎಂದು ಬೆಳಗಾವಿ ಸಂಸದ, ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದರು.</p>.<p>ವಿಜಯ ಸೇನಾ ಸಮಿತಿ ಸಂಸ್ಥಾಪಕ ವಿಜಯ ನಾಯ್ಕ, ತಾಲ್ಲೂಕು ಅಧ್ಯಕ್ಷ ಮಾರುತಿ ಮಾದರ, ಪ್ರಶಾಂತ ಅಂಗಡಿ, ಕರವೇ ಅಧ್ಯಕ್ಷ ವಿನಯ ಚಂದರಗಿ, ಸುಭಾಷ ಬಾರ್ಕಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-21-258739588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮದುರ್ಗ: ಪಟ್ಟಣದ ತೇರು ಬಜಾರಿನಲ್ಲಿರುವ ಟೌನ್ ಪೋಸ್ಟ್ ಕಚೇರಿಯನ್ನು ಪುನಃ ಆರಂಭಿಸುವ ಭರವಸೆಯನ್ನು ಲಿಖಿತವಾಗಿ ನೀಡಿದ ನಂತರ ಎರಡು ದಿನಗಳಿಂದ ಪ್ರಧಾನ ಅಂಚೆ ಕಚೇರಿ ಮುಂಭಾಗ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.</p>.<p>ವಿಜಯ ಸೇನೆಯ ಪದಾಧಿಕಾರಿಗಳು ಮತ್ತು ಫಲಾನುಭವಿಗಳು ಆರಂಭಿಸಿದ್ದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಆಗಮಿಸಿದ ರಾಮದುರ್ಗ ವಿಭಾಗದ ಇನ್ಸ್ಪೆಕ್ಟರ್ ನಾಗರಾಜ್ ಮಳ್ಳಿ, ದಾವಲಸಾಬ ಅಣ್ಣಿಗೇರಿ ಟೌನ್ ಪೋಸ್ಟ್ ಅನ್ನು ಪ್ರಧಾನ ಅಂಚೆ ಕಚೇರಿಗೆ ವಿಲೀನ ಮಾಡುವುದಿಲ್ಲ ಎಂದು ಭರವಸೆ ನೀಡಿದರು.</p>.<p>ರಾಮದುರ್ಗದಲ್ಲಿ ವಿಜಯ ಸೇನಾ ಸಮಿತಿಯು ಟೌನ್ ಪೋಸ್ಟ್ ಆಫೀಸ್ ವಿಲೀನ ಮಾಡಬಾರದು ಎಂದು ಬೆಳಗಾವಿ ಸಂಸದ, ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದರು.</p>.<p>ವಿಜಯ ಸೇನಾ ಸಮಿತಿ ಸಂಸ್ಥಾಪಕ ವಿಜಯ ನಾಯ್ಕ, ತಾಲ್ಲೂಕು ಅಧ್ಯಕ್ಷ ಮಾರುತಿ ಮಾದರ, ಪ್ರಶಾಂತ ಅಂಗಡಿ, ಕರವೇ ಅಧ್ಯಕ್ಷ ವಿನಯ ಚಂದರಗಿ, ಸುಭಾಷ ಬಾರ್ಕಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-21-258739588</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>