<p><strong>ಚಿಕ್ಕೋಡಿ</strong>: ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು, ಜಲಾಶಯಗಳಿಂದ ನೀರು ಬಿಡುಗಡೆ, ತುರ್ತು ಸಂದರ್ಭಗಳಲ್ಲಿ ನದಿ ತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶನಿವಾರ ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವ ರಾಜೇಂದ್ರ ಪಾಟೀಲ ಯಡ್ರಾವಕರ ಅವರ ಜತೆ ಚರ್ಚೆ ನಡೆಸಿದರು.</p>.<p>ಚಿಕ್ಕೋಡಿ ತಾಲ್ಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿಯನ್ನು ರಮೇಶ ಜಾರಕಿಹೊಳಿ ಪರಿಶೀಲಿಸುತ್ತಿದ್ದ ವೇಳೆ ಸಮೀಪದಲ್ಲಿ ಕೊಲ್ಹಾಪುರ ಜಿಲ್ಲೆಯ ಇಚಲಕರಂಜಿ ಬಳಿಯ ಪಂಚಗಂಗಾ ನದಿ ಸೇತುವೆ ಮೇಲೆರಾಜೇಂದ್ರ ಪಾಟೀಲ ಅವರು ಕೂಡ ಪ್ರವಾಹ ಸ್ಥಿತಿ ಪರಿಶೀಲಿಸುತ್ತಿದ್ದಾಗ ಭೇಟಿಯಾದರು.</p>.<p>‘ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಬಹಳಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಳೆಯ ಪ್ರಮಾಣ, ಜಲಾಶಯಗಳ ಮಟ್ಟ ಮತ್ತು ನೀರು ಬಿಡುಗಡೆಗೆ ಕುರಿತು ಎರಡೂ ರಾಜ್ಯಗಳು ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಹುದು’ ಎಂದು ತಿಳಿಸಿದರು.</p>.<p>ಇದಕ್ಕೆ ಸ್ಪಂದಿಸಿದ ರಾಜೇಂದ್ರ ಪಾಟೀಲ ಅವರು, ‘ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಸಚಿವರ ಜತೆ ಚರ್ಚಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು, ಜಲಾಶಯಗಳಿಂದ ನೀರು ಬಿಡುಗಡೆ, ತುರ್ತು ಸಂದರ್ಭಗಳಲ್ಲಿ ನದಿ ತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶನಿವಾರ ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವ ರಾಜೇಂದ್ರ ಪಾಟೀಲ ಯಡ್ರಾವಕರ ಅವರ ಜತೆ ಚರ್ಚೆ ನಡೆಸಿದರು.</p>.<p>ಚಿಕ್ಕೋಡಿ ತಾಲ್ಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿಯನ್ನು ರಮೇಶ ಜಾರಕಿಹೊಳಿ ಪರಿಶೀಲಿಸುತ್ತಿದ್ದ ವೇಳೆ ಸಮೀಪದಲ್ಲಿ ಕೊಲ್ಹಾಪುರ ಜಿಲ್ಲೆಯ ಇಚಲಕರಂಜಿ ಬಳಿಯ ಪಂಚಗಂಗಾ ನದಿ ಸೇತುವೆ ಮೇಲೆರಾಜೇಂದ್ರ ಪಾಟೀಲ ಅವರು ಕೂಡ ಪ್ರವಾಹ ಸ್ಥಿತಿ ಪರಿಶೀಲಿಸುತ್ತಿದ್ದಾಗ ಭೇಟಿಯಾದರು.</p>.<p>‘ಕಳೆದ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಬಹಳಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ ಈ ಬಾರಿ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದೆ. ಮಳೆಯ ಪ್ರಮಾಣ, ಜಲಾಶಯಗಳ ಮಟ್ಟ ಮತ್ತು ನೀರು ಬಿಡುಗಡೆಗೆ ಕುರಿತು ಎರಡೂ ರಾಜ್ಯಗಳು ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಪ್ರವಾಹ ಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬಹುದು’ ಎಂದು ತಿಳಿಸಿದರು.</p>.<p>ಇದಕ್ಕೆ ಸ್ಪಂದಿಸಿದ ರಾಜೇಂದ್ರ ಪಾಟೀಲ ಅವರು, ‘ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಸಚಿವರ ಜತೆ ಚರ್ಚಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>