<p><strong>ಬೆಳಗಾವಿ</strong>: ‘ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ಇದರ ಜೊತೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕ್ರಮಕೈಗೊಳ್ಳಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಸಲಹೆ ನೀಡಿದರು.</p>.<p>ಕೇಂದ್ರ ಸರ್ಕಾರದ ವಿವಿಧ ಸಚಿವರನ್ನು ಭೇಟಿಯಾಗಿ, ರಾಜ್ಯದ ಜಲಸಂಪನ್ಮೂಲ ಯೋಜನೆಗಳ ಬಗ್ಗೆ ಚರ್ಚಿಸಲು ರಮೇಶ ಜಾರಕಿಹೊಳಿ ಅವರು ನವದೆಹಲಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ನಡ್ಡಾ ಅವರನ್ನೂ ಭೇಟಿಯಾದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಪಕ್ಷದ ಕಾರ್ಯಕರ್ತರು ತೊಡಗಿದ್ದಾರೆ’ ಎಂದು ರಮೇಶ ಅವರು ಭರವಸೆ ನೀಡಿದರು.</p>.<p>‘ಕೃಷ್ಣಾ, ಕಾವೇರಿ ಸೇರಿದಂತೆ ವಿವಿಧ ನದಿಗಳ ರಾಜ್ಯದ ಪಾಲಿನ ನೀರನ್ನು ಬಳಸಲು ಅನುಕೂಲವಾಗುವಂತೆ ರಾಷ್ಟ್ರೀಯ ಜಲ ನೀತಿ ರೂಪಿಸಬೇಕು’ ಎಂದು ಅವರು ಕೋರಿದರು.</p>.<p>ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ಇದರ ಜೊತೆ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕ್ರಮಕೈಗೊಳ್ಳಿ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನವದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಸಲಹೆ ನೀಡಿದರು.</p>.<p>ಕೇಂದ್ರ ಸರ್ಕಾರದ ವಿವಿಧ ಸಚಿವರನ್ನು ಭೇಟಿಯಾಗಿ, ರಾಜ್ಯದ ಜಲಸಂಪನ್ಮೂಲ ಯೋಜನೆಗಳ ಬಗ್ಗೆ ಚರ್ಚಿಸಲು ರಮೇಶ ಜಾರಕಿಹೊಳಿ ಅವರು ನವದೆಹಲಿಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ನಡ್ಡಾ ಅವರನ್ನೂ ಭೇಟಿಯಾದರು.</p>.<p>‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಪಕ್ಷದ ಕಾರ್ಯಕರ್ತರು ತೊಡಗಿದ್ದಾರೆ’ ಎಂದು ರಮೇಶ ಅವರು ಭರವಸೆ ನೀಡಿದರು.</p>.<p>‘ಕೃಷ್ಣಾ, ಕಾವೇರಿ ಸೇರಿದಂತೆ ವಿವಿಧ ನದಿಗಳ ರಾಜ್ಯದ ಪಾಲಿನ ನೀರನ್ನು ಬಳಸಲು ಅನುಕೂಲವಾಗುವಂತೆ ರಾಷ್ಟ್ರೀಯ ಜಲ ನೀತಿ ರೂಪಿಸಬೇಕು’ ಎಂದು ಅವರು ಕೋರಿದರು.</p>.<p>ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>