<p><strong>ಬೆಳಗಾವಿ: </strong>ಗೋಕಾಕ್ನಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ರಾಯಬಾಗ ತಾಲ್ಲೂಕು ಕುಡಚಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಶ್ಯಾಮ್ ಘಾಟಗೆ ಅವರ ಮನೆಗೆ ಗುರುವಾರ ಭೇಟಿ ನೀಡಿ ಚರ್ಚಿಸಿರುವುದು ಅಚ್ಚರಿ ಮೂಡಿಸಿದೆ.</p>.<p>ಸಹೋದರ ಲಖನ್ ಜಾರಕಿಹೊಳಿ, ಅಳಿಯ ಅಂಬಿರಾವ ಪಾಟೀಲ ಮತ್ತು ಪುತ್ರ ಅಮರನಾಥ ಜಾರಕಿಹೊಳಿ ಅವರೊಂದಿಗೆ ತೆರಳಿ ಘಾಟಗೆ ಅವರೊಂದಿಗೆ ತಾಸಿಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ. ಅವರು ಮಾಡುತ್ತಿರುವ ಕೃಷಿಯ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ತೋಟದಲ್ಲಿ ವಿಹರಿಸಿದ್ದಾರೆ.</p>.<p>ರಾಜಕೀಯವಾಗಿ, ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ ಅವರ ಬದ್ಧ ವೈರಿಯನ್ನು (ಶ್ಯಾಮ್ ಘಾಟಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು) ರಮೇಶ ಭೇಟಿ ಆಗಿರುವುದು ಹಲವು ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿದೆ ಮತ್ತು ಕುತೂಹಲಕ್ಕೂ ಕಾರಣವಾಗಿದೆ.</p>.<p>ಪಿ.ರಾಜೀವ ತಮ್ಮೊಂದಿಗೆ ಅಂತರ ಕಾಯ್ದುಕೊಂಡಿರುವುದಕ್ಕೆ ರಮೇಶ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>‘ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ನಮ್ಮ ಜಮೀನಲ್ಲಿ 10 ಅಡಿ ಅಂತರದಲ್ಲಿ ಕಬ್ಬು ಬೆಳೆದಿರುವುದು ಮೊದಲಾದ ಕೃಷಿ ವಿಧಾನಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು’ ಎಂದು ಘಾಟಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಗೋಕಾಕ್ನಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ರಾಯಬಾಗ ತಾಲ್ಲೂಕು ಕುಡಚಿ ಪಟ್ಟಣದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಶ್ಯಾಮ್ ಘಾಟಗೆ ಅವರ ಮನೆಗೆ ಗುರುವಾರ ಭೇಟಿ ನೀಡಿ ಚರ್ಚಿಸಿರುವುದು ಅಚ್ಚರಿ ಮೂಡಿಸಿದೆ.</p>.<p>ಸಹೋದರ ಲಖನ್ ಜಾರಕಿಹೊಳಿ, ಅಳಿಯ ಅಂಬಿರಾವ ಪಾಟೀಲ ಮತ್ತು ಪುತ್ರ ಅಮರನಾಥ ಜಾರಕಿಹೊಳಿ ಅವರೊಂದಿಗೆ ತೆರಳಿ ಘಾಟಗೆ ಅವರೊಂದಿಗೆ ತಾಸಿಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ. ಅವರು ಮಾಡುತ್ತಿರುವ ಕೃಷಿಯ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ತೋಟದಲ್ಲಿ ವಿಹರಿಸಿದ್ದಾರೆ.</p>.<p>ರಾಜಕೀಯವಾಗಿ, ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ ಅವರ ಬದ್ಧ ವೈರಿಯನ್ನು (ಶ್ಯಾಮ್ ಘಾಟಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು) ರಮೇಶ ಭೇಟಿ ಆಗಿರುವುದು ಹಲವು ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿದೆ ಮತ್ತು ಕುತೂಹಲಕ್ಕೂ ಕಾರಣವಾಗಿದೆ.</p>.<p>ಪಿ.ರಾಜೀವ ತಮ್ಮೊಂದಿಗೆ ಅಂತರ ಕಾಯ್ದುಕೊಂಡಿರುವುದಕ್ಕೆ ರಮೇಶ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.</p>.<p>‘ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ನಮ್ಮ ಜಮೀನಲ್ಲಿ 10 ಅಡಿ ಅಂತರದಲ್ಲಿ ಕಬ್ಬು ಬೆಳೆದಿರುವುದು ಮೊದಲಾದ ಕೃಷಿ ವಿಧಾನಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು’ ಎಂದು ಘಾಟಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>