ಮಹಾರಾಷ್ಟ್ರದಲ್ಲಿರುವ ಶಿವಸೇನಾ ನೇತೃತ್ವದ ಸರ್ಕಾರವನ್ನು ಕೆಡವಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಉದ್ದೇಶದಿಂದ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲಿ ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಕೆಡವಿದ ರೀತಿಯ ಕಾರ್ಯತಂತ್ರವನ್ನು ಮಹಾರಾಷ್ಟ್ರದಲ್ಲೂ ಅಳವಡಿಸಿಕೊಳ್ಳುವ ಬಗ್ಗೆ ಈ ನಾಯಕರು ಸಮಾಲೋಚನೆ ನಡೆಸಿದ್ದಾರೆ.