‘ರಾಜಕೀಯ ಗಿಮಿಕ್ಗಾಗಿ ಅವರು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಅವರ ರಾಜ್ಯದ ಹಿತ ಕಾಪಾಡಿಕೊಳ್ಳಲು ಹೀಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಅಲ್ಲಿ ರಾಜಕೀಯ ನಡೆಯುತ್ತದೆ. ಆದರೆ, ನಮ್ಮ ರಾಜ್ಯದ ಹಿತ ಕಾಯಲು ನಾವು ಬದ್ಧವಾಗಿದ್ದೇವೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಷಯ ಆಗಿರುವುದರಿಂದ ಎಲ್ಲವನ್ನೂ ಮಾಧ್ಯಮದ ಮುಂದೆ ಹೇಳಲಾಗುವುದಿಲ್ಲ. ಕಾಮಗಾರಿ ಆರಂಭಕ್ಕೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆಯಿಂದ ಅಗತ್ಯ ಅನುಮತಿ ಪಡೆದುಕೊಳ್ಳಲು ಬೇಕಾದ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ’ ಎಂದರು.