<p><strong>ಗೋಕಾಕ</strong>: ‘ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮತ್ತು ಅದರಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಒತ್ತಡ ದೂರ ಅಗುವುದರೊಂದಿಗೆ ಮನಸ್ಸಿಗೆ ಶಾಂತಿ–ನೆಮ್ಮದಿ ಎಂಬ ಫಲ ಲಭಿಸುತ್ತದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಕುರಬರ ದಡ್ಡಿಯ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿಶನಿವಾರ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಸಮಿತಿಯವರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು.</p>.<p>‘ಭಕ್ತಿ ಎನ್ನುವುದು ಮನಸ್ಸಿನಲ್ಲಿದ್ದರೆ ಸಾಕು. ಪ್ರತಿ ದಿನ ಒಳ್ಳೆಯ ಮನಸ್ಸಿನಿಂದ ಪೂಜೆ ಮಾಡಿದರೆ, ದೇವರ ಅನುಗ್ರಹವಾಗುತ್ತದೆ. ನಾವು ಒಳ್ಳೆಯತನ ರೂಢಿಸಿಕೊಂಡರೆ ಇತರರಿಗೂ ಉತ್ತಮ. ಅದರಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ’ ಎಂದು ತಿಳಿಸಿದರು.</p>.<p>ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಮುಖಂಡ ತುಕಾರಾಮ ಕಾಗಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಸದಸ್ಯ ಸಿದ್ದಪ್ಪ ಹುಚ್ಚರಾಯಪ್ಪಗೋಳ, ಹನುಮಂತ ಕಾಳಮ್ಮನಗುಡಿ, ಹರೀಶ ಬೂದಿಹಾಳ, ವಿಜಯ ಜತ್ತಿ, ಕೆಂಚಪ್ಪ ಗೌಡರ, ರಾಯಪ್ಪ ಗೋಟೆನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ</strong>: ‘ಧಾರ್ಮಿಕ ಕಾರ್ಯಕ್ರಮ ನಡೆಸುವುದರಿಂದ ಮತ್ತು ಅದರಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಒತ್ತಡ ದೂರ ಅಗುವುದರೊಂದಿಗೆ ಮನಸ್ಸಿಗೆ ಶಾಂತಿ–ನೆಮ್ಮದಿ ಎಂಬ ಫಲ ಲಭಿಸುತ್ತದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಕುರಬರ ದಡ್ಡಿಯ ವಿಠ್ಠಲ ದೇವರ ಹಾಗೂ ಮುರಸಿದ್ದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿಶನಿವಾರ ಭಾಗವಹಿಸಿ ದೇವರ ದರ್ಶನ ಪಡೆದು, ಜಾತ್ರಾ ಸಮಿತಿಯವರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು.</p>.<p>‘ಭಕ್ತಿ ಎನ್ನುವುದು ಮನಸ್ಸಿನಲ್ಲಿದ್ದರೆ ಸಾಕು. ಪ್ರತಿ ದಿನ ಒಳ್ಳೆಯ ಮನಸ್ಸಿನಿಂದ ಪೂಜೆ ಮಾಡಿದರೆ, ದೇವರ ಅನುಗ್ರಹವಾಗುತ್ತದೆ. ನಾವು ಒಳ್ಳೆಯತನ ರೂಢಿಸಿಕೊಂಡರೆ ಇತರರಿಗೂ ಉತ್ತಮ. ಅದರಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ’ ಎಂದು ತಿಳಿಸಿದರು.</p>.<p>ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಮುಖಂಡ ತುಕಾರಾಮ ಕಾಗಲ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಸದಸ್ಯ ಸಿದ್ದಪ್ಪ ಹುಚ್ಚರಾಯಪ್ಪಗೋಳ, ಹನುಮಂತ ಕಾಳಮ್ಮನಗುಡಿ, ಹರೀಶ ಬೂದಿಹಾಳ, ವಿಜಯ ಜತ್ತಿ, ಕೆಂಚಪ್ಪ ಗೌಡರ, ರಾಯಪ್ಪ ಗೋಟೆನ್ನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>