ಹೇಳಿಕೆ ನೀಡಿರುವ ಅವರು, ‘ಬಿಹಾರ, ಮಧ್ಯಪ್ರದೇಶ ಇನ್ನಿತರ ರಾಜ್ಯಗಳ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿಯಾಗಿ ಜಯ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಉತ್ತಮವಾಗಿ ಬೆಳವಣಿಗೆ ಹೊಂದುತ್ತಿದೆ. ಈ ಗೆಲುವು ಸಾಧಿಸಲು ಕಾರಣಕರ್ತರಾದ ಕಾರ್ಯಕರ್ತರು ಹಾಗೂ ಜನರಿಗೆ ಗೆಲುವು ಸಮರ್ಪಿತವಾಗಿದೆ. ನಮ್ಮ ಸಾಮಾಜಿಕ ಜವಾಬ್ದಾರಿಯೂ ಹೆಚ್ಚಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಇನ್ನೂ ಹೆಚ್ಚಿನದನ್ನು ಸಾಧಿಸಲು ಅನುಕೂಲವಾಗಿದೆ’ ಎಂದು ಹೇಳಿದ್ದಾರೆ.