ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಈ ಬಾರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ ಅವರ ಪಾತ್ರ ಬಹಳ ದೊಡ್ಡದು. ಇದನ್ನು ರಾಜ್ಯದ ಜನರೊಂದಿಗೆ ಬಿಜೆಪಿಯವರೂ ಒಪ್ಪುತ್ತಾರೆ. ಅವರು ಅಭಿವೃದ್ಧಿ ವಿಷಯದಲ್ಲಿ ವೇಗದಲ್ಲಿದ್ದುದು ಬಹಳ ಮಂದಿಗೆ ಸಹಿಸಲಾಗಲಿಲ್ಲ ಎನಿಸುತ್ತದೆ. ಅವರಿಗೆ ಅನ್ಯಾಯವಾಗಿದೆ’ ಎಂದರು.