<p><strong>ಬೆಳಗಾವಿ: </strong>ರಮೇಶ ಜಾರಕಿಹೊಳಿ ಅವರ ರಾಜೀನಾಮೆ ಅಂಗಿಕರಿಸಿದಂತೆ ಆಗ್ರಹಿಸಿ ಗೋಕಾಕ ನಗರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಅಂಗೀಕರಿಸಿದಲ್ಲಿ ಬೆಳಗಾವಿ ಜಿಲ್ಲೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/bjp-minister-ramesh-jarakiholi-sex-scandal-video-leak-resignation-to-the-post-810119.html"><strong>ಲೈಂಗಿಕ ದುರ್ಬಳಕೆ, ವಂಚನೆ ಆರೋಪ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ</strong></a></p>.<p>ಗೋಕಾಕದ ಬಸವೇಶ್ವರ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.</p>.<p>ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆಯೇ ವಿನಃ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಈ ನಡುವೆ ರಮೇಶ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಗೋಕಾಕದಲ್ಲಿ ರಮೇಶ ಬೆಂಬಲಿಗರು ಕೆಲವು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಕೆಲವರು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿಕೊಂಡು ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ರಮೇಶ ಜಾರಕಿಹೊಳಿ ಅವರ ರಾಜೀನಾಮೆ ಅಂಗಿಕರಿಸಿದಂತೆ ಆಗ್ರಹಿಸಿ ಗೋಕಾಕ ನಗರದಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಅಂಗೀಕರಿಸಿದಲ್ಲಿ ಬೆಳಗಾವಿ ಜಿಲ್ಲೆ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಇದನ್ನೂ ಓದಿ.. <a href="https://www.prajavani.net/karnataka-news/bjp-minister-ramesh-jarakiholi-sex-scandal-video-leak-resignation-to-the-post-810119.html"><strong>ಲೈಂಗಿಕ ದುರ್ಬಳಕೆ, ವಂಚನೆ ಆರೋಪ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ</strong></a></p>.<p>ಗೋಕಾಕದ ಬಸವೇಶ್ವರ ವೃತ್ತದಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು.</p>.<p>ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣದಿಂದ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸಿದ್ದಾರೆಯೇ ವಿನಃ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಈ ನಡುವೆ ರಮೇಶ ಬೆಂಬಲಿಗನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೂ ನಡೆದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಗೋಕಾಕದಲ್ಲಿ ರಮೇಶ ಬೆಂಬಲಿಗರು ಕೆಲವು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಕೆಲವರು ಸ್ವಯಂಪ್ರೇರಿತವಾಗಿ ಬಾಗಿಲು ಹಾಕಿಕೊಂಡು ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>