‘ಜಂಟಿ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಸ್ಪಷ್ಟಪಡಿಸುತ್ತೇವೆ’ ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರಲ್ಲಾ ಎಂಬ ಪ್ರಶ್ನೆಗೆ, ‘ಬಾಲಚಂದ್ರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರೊಂದಿಗೆ ಮಾತನಾಡುತ್ತೇನೆ. ನಾನು ಬೆಂಗಳೂರು ಮತ್ತು ಮುಂಬೈಗೆ ಹೋಗಿದ್ದೆ. ಸುದ್ದಿಗೋಷ್ಠಿ ಮಾಡುವ ಸಂದರ್ಭ ಈಗ ಬಂದಿಲ್ಲ. ನಾನು ಒಂಟಿಯಾಗುವ ಪ್ರಶ್ನೆಯೇ ಇಲ್ಲ. ಮಿತ್ರ ಮಂಡಳಿ ಸದಸ್ಯರನ್ನು ಭೇಟಿಯಾಗಲು ಸಾಧ್ಯವಾಗಿಲ್ಲವಷ್ಟೆ’ ಎಂದು ಹೇಳಿದರು.