ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ವಿಶ್ವನಾಥ ಆಕ್ರೋಶ ವ್ಯಕ್ತಪಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ವಿಶ್ವನಾಥ್ ಹಿರಿಯರು. ಅವರು ಮಾತನಾಡುವುದನ್ನು ಆಶೀರ್ವಾದ ಎಂದು ಭಾವಿಸೋಣ. ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿದಾನಸಭಾ ಕ್ಷೇತ್ರಗಳ ಉಪ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿಗಳ ಚುನಾವಣೆ ಬಳಿಕ ಸಂಪುಟ ಪುನಾರಚನೆ ಆಗಲಿದೆ. ಆಗ, ಬಹಳಷ್ಟು ಮಂದಿಗೆ ಅವಕಾಶ ಸಿಗಲಿದೆ’ ಎಂದರು.