<p><strong>ಬೆಳಗಾವಿ: </strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲಿಗರು ತಂಡೋಪ ತಂಡವಾಗಿ ಬರುತ್ತಿರುವುದರಿಂದ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.</p>.<p>ಗೋಕಾಕದಿಂದ ವಾಹನಗಳಲ್ಲಿ ಜಾರಕಿಹೊಳಿ ಅಭಿಮಾನಿಗಳು ಬರುತ್ತಿದ್ದಾರೆ. ಈಗಾಗಲೇ ಒಂದಷ್ಟು ಮಂದಿ ಬಂದು ಸೇರಿದ್ದಾರೆ. ಅವರನ್ನು ಪೊಲೀಸರು ನಿಲ್ದಾಣ ಸಮೀಪದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದಾರೆ. ಅವರು ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಯೋಜಿಸಿದ್ದಾರೆ.</p>.<p>ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿರುವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ರಮೇಶಗೆ ಜೈಕಾರ ಹಾಕುತ್ತಿದ್ದಾರೆ.</p>.<p>ಡಿಕೆಶಿ ಬಂಧಿಸಿದರೆ ಶಾಂತಿ, ಇಲ್ಲವಾದರೆ ಕ್ರಾಂತಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಗೋ ಬ್ಯಾಕ್ ಡಿಕೆಶಿ ಎಂದು ಕೂಗುತ್ತಿದ್ದಾರೆ.</p>.<p>ಡಿಸಿಪಿ ವಿಕ್ರಂ ಅಮಟೆ, ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.</p>.<p>ಶಿವಕುಮಾರ್ ಮಧ್ಯಾಹ್ನ 3ಕ್ಕೆ ಬರುವ ವಿಮಾನದಲ್ಲಿ ಬಂದಿಳಿಯಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/belagavi/ramesh-jarkiholi-cd-case-protest-in-gokak-for-dk-shivakumar-resignation-politics-congress-bjp-817220.html" target="_blank">ಸಿ.ಡಿ ಪ್ರಕರಣ: ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕದಲ್ಲಿ ಪ್ರತಿಭಟನೆ</a></strong></p>.<p>ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಅವರ ಪುತ್ರ ಮೃಣಾಲ್ ಹೆಬ್ಬಾಳಕರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಮೊದಲಾದವರು ಇದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/belagavi/politics-congress-belagavi-lok-sabha-bypoll-satish-jarkiholi-nomination-tomorrow-817212.html" target="_blank">ಬೆಳಗಾವಿ ಲೋಕಸಭಾ ಕ್ಷೇತ್ರ: ‘ಕರಿ’ಯಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರ ಬೆಂಬಲಿಗರು ತಂಡೋಪ ತಂಡವಾಗಿ ಬರುತ್ತಿರುವುದರಿಂದ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಇನ್ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.</p>.<p>ಗೋಕಾಕದಿಂದ ವಾಹನಗಳಲ್ಲಿ ಜಾರಕಿಹೊಳಿ ಅಭಿಮಾನಿಗಳು ಬರುತ್ತಿದ್ದಾರೆ. ಈಗಾಗಲೇ ಒಂದಷ್ಟು ಮಂದಿ ಬಂದು ಸೇರಿದ್ದಾರೆ. ಅವರನ್ನು ಪೊಲೀಸರು ನಿಲ್ದಾಣ ಸಮೀಪದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದಾರೆ. ಅವರು ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಯೋಜಿಸಿದ್ದಾರೆ.</p>.<p>ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಮಾಡಿರುವ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ರಮೇಶಗೆ ಜೈಕಾರ ಹಾಕುತ್ತಿದ್ದಾರೆ.</p>.<p>ಡಿಕೆಶಿ ಬಂಧಿಸಿದರೆ ಶಾಂತಿ, ಇಲ್ಲವಾದರೆ ಕ್ರಾಂತಿ ಎಂದು ಬೆದರಿಕೆ ಹಾಕುತ್ತಿದ್ದಾರೆ. ಗೋ ಬ್ಯಾಕ್ ಡಿಕೆಶಿ ಎಂದು ಕೂಗುತ್ತಿದ್ದಾರೆ.</p>.<p>ಡಿಸಿಪಿ ವಿಕ್ರಂ ಅಮಟೆ, ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ.</p>.<p>ಶಿವಕುಮಾರ್ ಮಧ್ಯಾಹ್ನ 3ಕ್ಕೆ ಬರುವ ವಿಮಾನದಲ್ಲಿ ಬಂದಿಳಿಯಲಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/belagavi/ramesh-jarkiholi-cd-case-protest-in-gokak-for-dk-shivakumar-resignation-politics-congress-bjp-817220.html" target="_blank">ಸಿ.ಡಿ ಪ್ರಕರಣ: ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕದಲ್ಲಿ ಪ್ರತಿಭಟನೆ</a></strong></p>.<p>ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಅವರ ಪುತ್ರ ಮೃಣಾಲ್ ಹೆಬ್ಬಾಳಕರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಮೊದಲಾದವರು ಇದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/belagavi/politics-congress-belagavi-lok-sabha-bypoll-satish-jarkiholi-nomination-tomorrow-817212.html" target="_blank">ಬೆಳಗಾವಿ ಲೋಕಸಭಾ ಕ್ಷೇತ್ರ: ‘ಕರಿ’ಯಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>