ಕಾಂಗ್ರೆಸ್ನಲ್ಲಿದ್ದಾಗ ಅಥಣಿ ಕ್ಷೇತ್ರದಿಂದ ಮಹೇಶ ಕುಮಠಳ್ಳಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡಿದ್ದ ದಿನಗಳಿಂದಲೂ ರಮೇಶ ವಿರುದ್ಧ ಸವದಿ ಮುನಿಸಿಕೊಂಡಿದ್ದರು. ರಮೇಶ ಬಿಜೆಪಿಗೆ ಸೇರಿದ್ದರೂ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಈಗ, ಹಳೆ ವೈಷಮ್ಯ ಮರೆತಿರುವ ಸಂದೇಶ ರವಾನಿಸಿದ್ದಾರೆ. ‘ನಾವಿಬ್ಬರೂ ಹಿಂದಿನಿಂದಲೂ ಒಂದೇ ಆಗಿದ್ದೆವು’ ಎಂದು ಹೇಳಿದರು.