’ನೀರಿನ ಪ್ರಮಾಣ ಹೆಚ್ಚಳವಾದರೆ ಮಹಾರಾಷ್ಟ್ರ ತಕ್ಷಣವೇ ನೀರು ಬಿಡುಗಡೆ ಮಾಡುತ್ತದೆ. ಅದಕ್ಕಾಗಿ ನಿರಂತರ ನಿಗಾ ವಹಿಸಬೇಕಾಗಿದೆ. ವಿಶೇಷವಾಗಿ ಕೊಯ್ನಾ ಮತ್ತು ರಾಜ್ಯದ ಆಲಮಟ್ಟಿ ಜಲಾಶಯಗಳ ಬಗ್ಗೆ ಉಭಯ ರಾಜ್ಯಗಳ ಅಧಿಕಾರಿಗಳು ಸತತ ಮಾಹಿತಿ ವಿನಿಮಯ ಮತ್ತು ಸಮನ್ವಯತೆ ಸಾಧಿಸಬೇಕು. ಜಿಲ್ಲೆಯ ಜಲಾಶಯಗಳಿಂದ ಮೊದಲು ಕೆರೆಗಳನ್ನು ತುಂಬಿಸಬೇಕು. ಇದಾದ ಬಳಿಕವೇ ಮುಂದೆ ನೀರು ಬಿಡುಗಡೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.