ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಬಿಡುಗಡೆ ಸಮನ್ವಯತೆಗೆ ಅಧಿಕಾರಿ ನಿಯೋಜನೆ: ಸಚಿವ ಜಾರಕಿಹೊಳಿ

ಪ್ರವಾಹ ಮತ್ತು ಕೋವಿಡ್- 19 ನಿಯಂತ್ರಣ: ಪರಿಶೀಲನಾ ಸಭೆ
Last Updated 7 ಆಗಸ್ಟ್ 2020, 8:41 IST
ಅಕ್ಷರ ಗಾತ್ರ

ಬೆಳಗಾವಿ: ‘ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ ಜಲಾಶಯಗಳಿಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಕೋವಿಡ್-19 ನಿಯಂತ್ರಣ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

’ನೀರಿನ ಪ್ರಮಾಣ ಹೆಚ್ಚಳವಾದರೆ ಮಹಾರಾಷ್ಟ್ರ ತಕ್ಷಣವೇ ನೀರು‌ ಬಿಡುಗಡೆ ಮಾಡುತ್ತದೆ. ಅದಕ್ಕಾಗಿ ನಿರಂತರ ನಿಗಾ ವಹಿಸಬೇಕಾಗಿದೆ. ವಿಶೇಷವಾಗಿ ಕೊಯ್ನಾ ಮತ್ತು ರಾಜ್ಯದ ಆಲಮಟ್ಟಿ ಜಲಾಶಯಗಳ ಬಗ್ಗೆ ಉಭಯ ರಾಜ್ಯಗಳ ಅಧಿಕಾರಿಗಳು ಸತತ‌ ಮಾಹಿತಿ ವಿನಿಮಯ ಮತ್ತು ಸಮನ್ವಯತೆ ಸಾಧಿಸಬೇಕು. ಜಿಲ್ಲೆಯ ಜಲಾಶಯಗಳಿಂದ ಮೊದಲು‌ ಕೆರೆಗಳನ್ನು ತುಂಬಿಸಬೇಕು. ಇದಾದ ಬಳಿಕವೇ ಮುಂದೆ ನೀರು ಬಿಡುಗಡೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT