<p><strong>ನವದೆಹಲಿ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ರಮೇಶ ಜಾರಕಿ ಹೊಳಿ ಅವರು ತಮ್ಮ ವಿರುದ್ಧದ ಸಿ.ಡಿ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು. </p>.<p>ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾನು ಗೃಹ ಸಚಿವರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿದ್ದೇನೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿದ್ದೇನೆ’ ಎಂದರು. </p>.<p>ಸಿಬಿಐ ಮೂಲಕ ಪ್ರಕರಣದ ತನಿಖೆ ನಡೆಸಲು ಗೃಹ ಸಚಿವರು ಒಪ್ಪಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು. </p>.<p>ತಮ್ಮ ರಾಜಕೀಯ ವರ್ಚಸ್ಸು ಹಾಳು ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಸಿ.ಡಿ. ಮಾಡಿಸಿದ್ದಾರೆ ಎಂಬುದಾಗಿ ಗೃಹ ಸಚಿವರಲ್ಲಿ ಜಾರಕಿಹೊಳಿ ದೂರಿದರು ಎಂದು ಆಪ್ತ ಮೂಲಗಳು ತಿಳಿಸಿವೆ. </p>.<p>‘ನನ್ನ ಹಾಗೂ ಯುವತಿಗೆ ಸಂಬಂಧಿಸಿದ ಸಿ.ಡಿ ಮಾಡಿಸಿದ್ದು ಇದೇ ಮಹಾನಾಯಕ. ರಮೇಶಜಾರಕಿಹೊಳಿಯನ್ನು ಜೈಲಿಗೆ ಕಳಿಸಲು ₹40 ಕೋಟಿ ಖರ್ಚುಮಾಡುತ್ತೇನೆ ಎಂದು ಮಹಾನಾಯಕ ಹೇಳಿದ ಆಡಿಯೊ ನನ್ನ ಬಳಿ ಇದೆ. ನನ್ನ ಪ್ರಕರಣದಲ್ಲಿರುವ ಆ ಹುಡುಗಿ, ಶ್ರವಣ್ ಮತ್ತು ನರೇಶ್, ಕನಕಪುರದ ಗ್ರಾನೈಟ್ ಉದ್ಯಮಿ, ಅವನ ಕಾರ್ ಚಾಲಕ ಪರಶಿವಮೂರ್ತಿ, ಮಂಡ್ಯದ ಇಬ್ಬರು ನಾಯಕರು ಆರೋಪಿಗಳು. ಹಾಗಾಗಿ, ಈ ಪ್ರಕರಣ ಸಿಬಿಐಗೆ ಒಪ್ಪಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ಸೋಮವಾರ ಹೇಳಿದ್ದರು. ರಮೇಶ್ ಅವರ ಆರೋಪವನ್ನು ಶಿವಕುಮಾರ್ ನಿರಾಕರಿಸಿದ್ದರು. </p>.<p><a href="https://www.prajavani.net/district/bengaluru-city/nepal-women-dead-body-found-in-hulimavu-police-station-limits-1012353.html" itemprop="url">6 ತಿಂಗಳ ನಂತರ ಬೆಂಗಳೂರಿನಲ್ಲಿ ನೇಪಾಳ ಯುವತಿ ಮೃತದೇಹ ಪೊದೆಯಲ್ಲಿ ಪತ್ತೆ: ಕೊಲೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ರಮೇಶ ಜಾರಕಿ ಹೊಳಿ ಅವರು ತಮ್ಮ ವಿರುದ್ಧದ ಸಿ.ಡಿ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು. </p>.<p>ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾನು ಗೃಹ ಸಚಿವರನ್ನು ಭೇಟಿ ಮಾಡಿ ದಾಖಲೆಗಳನ್ನು ನೀಡಿದ್ದೇನೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಮಾಡಿದ್ದೇನೆ’ ಎಂದರು. </p>.<p>ಸಿಬಿಐ ಮೂಲಕ ಪ್ರಕರಣದ ತನಿಖೆ ನಡೆಸಲು ಗೃಹ ಸಚಿವರು ಒಪ್ಪಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು. </p>.<p>ತಮ್ಮ ರಾಜಕೀಯ ವರ್ಚಸ್ಸು ಹಾಳು ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಸಿ.ಡಿ. ಮಾಡಿಸಿದ್ದಾರೆ ಎಂಬುದಾಗಿ ಗೃಹ ಸಚಿವರಲ್ಲಿ ಜಾರಕಿಹೊಳಿ ದೂರಿದರು ಎಂದು ಆಪ್ತ ಮೂಲಗಳು ತಿಳಿಸಿವೆ. </p>.<p>‘ನನ್ನ ಹಾಗೂ ಯುವತಿಗೆ ಸಂಬಂಧಿಸಿದ ಸಿ.ಡಿ ಮಾಡಿಸಿದ್ದು ಇದೇ ಮಹಾನಾಯಕ. ರಮೇಶಜಾರಕಿಹೊಳಿಯನ್ನು ಜೈಲಿಗೆ ಕಳಿಸಲು ₹40 ಕೋಟಿ ಖರ್ಚುಮಾಡುತ್ತೇನೆ ಎಂದು ಮಹಾನಾಯಕ ಹೇಳಿದ ಆಡಿಯೊ ನನ್ನ ಬಳಿ ಇದೆ. ನನ್ನ ಪ್ರಕರಣದಲ್ಲಿರುವ ಆ ಹುಡುಗಿ, ಶ್ರವಣ್ ಮತ್ತು ನರೇಶ್, ಕನಕಪುರದ ಗ್ರಾನೈಟ್ ಉದ್ಯಮಿ, ಅವನ ಕಾರ್ ಚಾಲಕ ಪರಶಿವಮೂರ್ತಿ, ಮಂಡ್ಯದ ಇಬ್ಬರು ನಾಯಕರು ಆರೋಪಿಗಳು. ಹಾಗಾಗಿ, ಈ ಪ್ರಕರಣ ಸಿಬಿಐಗೆ ಒಪ್ಪಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ ಸೋಮವಾರ ಹೇಳಿದ್ದರು. ರಮೇಶ್ ಅವರ ಆರೋಪವನ್ನು ಶಿವಕುಮಾರ್ ನಿರಾಕರಿಸಿದ್ದರು. </p>.<p><a href="https://www.prajavani.net/district/bengaluru-city/nepal-women-dead-body-found-in-hulimavu-police-station-limits-1012353.html" itemprop="url">6 ತಿಂಗಳ ನಂತರ ಬೆಂಗಳೂರಿನಲ್ಲಿ ನೇಪಾಳ ಯುವತಿ ಮೃತದೇಹ ಪೊದೆಯಲ್ಲಿ ಪತ್ತೆ: ಕೊಲೆ? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>