<p><strong>ಗೋಕಾಕ:</strong> ಗ್ರಾಮ ದೇವತೆಯರ ಜಾತ್ರೆಗೆ ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಲ್ಲ ರೀತಿಯ ಪೂರ್ವ ಸಿದ್ಧತೆಯೊಂದಿಗೆ ಜಾತ್ರೆಗೆ ಬರುವ ಜನತೆಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಜಾತ್ರಾ ಕಮಿಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು.</p>.<p>ಗುರುವಾರ ಕರೆದಿದ್ದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>10 ವರ್ಷಗಳ ನಂತರ ನಡೆಯುತ್ತಿರುವ ಈ ಜಾತ್ರೆ ವಿಶೇಷಯತೆಯಿಂದ ಕೂಡಿದೆ. ದೇವತೆಯರ ಗುಡಿಗಳು ನವೀಕರಣಗೊಂಡು ಹೆಚ್ಚು ಆಕಷರ್ಣೆಯಿಂದ ಕಂಗೊಳಿಸುತ್ತಿವೆ. ಜನತೆಯು ಈ ಬಾರಿಯ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವ ಉತ್ಸುಕತೆಯಲ್ಲಿದ್ದಾರೆ. ಇಲಾಖೆಗಳು ಹೆಚ್ಚಿನ ಸೌಲಭ್ಯಗಳನ್ನು ಜನತೆಗೆ ತಲುಪಿಸಿ ಅವರ ಉತ್ಸುಕತೆಯನ್ನು ಇಮ್ಮಡಿಗೊಳಿಸಲಿ. ರಥೋತ್ಸವ ಮುಗಿದ ನಂತರ ಭಂಡಾರ ಆಡುವಂತಿಲ್ಲ. ಭಂಡಾರದಲ್ಲಿ ರಾಸಾಯನಿಕ ಮಿಶ್ರಣವಾದರೆ ಅಂಗಡಿಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ಗ್ರಾಮ ದೇವತೆಯರ ಜಾತ್ರೆಗೆ ನಗರಸಭೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಎಲ್ಲ ರೀತಿಯ ಪೂರ್ವ ಸಿದ್ಧತೆಯೊಂದಿಗೆ ಜಾತ್ರೆಗೆ ಬರುವ ಜನತೆಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಜಾತ್ರಾ ಕಮಿಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು.</p>.<p>ಗುರುವಾರ ಕರೆದಿದ್ದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.</p>.<p>10 ವರ್ಷಗಳ ನಂತರ ನಡೆಯುತ್ತಿರುವ ಈ ಜಾತ್ರೆ ವಿಶೇಷಯತೆಯಿಂದ ಕೂಡಿದೆ. ದೇವತೆಯರ ಗುಡಿಗಳು ನವೀಕರಣಗೊಂಡು ಹೆಚ್ಚು ಆಕಷರ್ಣೆಯಿಂದ ಕಂಗೊಳಿಸುತ್ತಿವೆ. ಜನತೆಯು ಈ ಬಾರಿಯ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವ ಉತ್ಸುಕತೆಯಲ್ಲಿದ್ದಾರೆ. ಇಲಾಖೆಗಳು ಹೆಚ್ಚಿನ ಸೌಲಭ್ಯಗಳನ್ನು ಜನತೆಗೆ ತಲುಪಿಸಿ ಅವರ ಉತ್ಸುಕತೆಯನ್ನು ಇಮ್ಮಡಿಗೊಳಿಸಲಿ. ರಥೋತ್ಸವ ಮುಗಿದ ನಂತರ ಭಂಡಾರ ಆಡುವಂತಿಲ್ಲ. ಭಂಡಾರದಲ್ಲಿ ರಾಸಾಯನಿಕ ಮಿಶ್ರಣವಾದರೆ ಅಂಗಡಿಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.</p>.<p>ಸಭೆಯಲ್ಲಿ ತಹಶೀಲ್ದಾರ್ ಡಾ.ಮೋಹನ ಭಸ್ಮೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>