ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಡಿ ಪ್ರಕರಣ: ಎಸ್ಐಟಿ ತಂಡ ಮತ್ತೆ ಬೆಳಗಾವಿಗೆ

Last Updated 24 ಏಪ್ರಿಲ್ 2021, 20:49 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡದ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಕೋವಿಡ್‌ನಿಂದ ಗುಣಮುಖವಾಗಿದ್ದ ರಮೇಶ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ‘ಎಸ್‌ಐಟಿ ತಂಡದವರು ರಮೇಶ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು’ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ತಿಳಿಸಿದರು.

ರಮೇಶ ಅವರಿಗೆ ಎಸ್‌ಐಟಿಯವರು ಈಚೆಗೆ ಮತ್ತೊಮ್ಮೆ ನೋಟಿಸ್ ನೀಡಿದ್ದರು. ಆದರೆ, ಅವರು ಅನಾರೋಗ್ಯದ ಕಾರಣದಿಂದ ಗೈರು ಹಾಜರಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ತಿಳಿಯಲು ಅಧಿಕಾರಿಗಳು ಬಂದಿದ್ದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT