<p><strong>ಬೆಳಗಾವಿ:</strong> ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.</p><p>ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು. ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್ ಠಾಣೆಗೆ ದೂರು ನೀಡಿದ್ದಾರೆ.</p><p>ಅಲ್ಲದೇ, ಸೋಮವಾರ (ಅ.20) ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ.</p>.<h3><strong>ಹೇಳಿಕೆ ತಿರುಚಲಾಗಿದೆ: ರಮೇಶ ಕತ್ತಿ</strong></h3><p>‘ಬಿಡಿಸಿಸಿ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿಮಾನಿಗಳು ಡಾಲ್ಬಿ ಸಂಗೀತ ಹಚ್ಚಿ ಮೆರವಣಿಗೆ ಮಾಡಲು ಒತ್ತಾಯಿಸಿದರು. ಆಗ ನಾನು ಬ್ಯಾಡರೋ (ಬೇಡ) ಎಂದೆ. ಈ ಹೇಳಿಕೆ ತಿರುಚಿ ಜಾತಿ ನಿಂದನೆ ಎಂದು ವಿಡಿಯೊ ವೈರಲ್ ಮಾಡಿದ್ದಾರೆ’ ಎಂದು ಮಾಜಿ ಸಂಸದರೂ ಆದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.</p><p>ವಿಡಿಯೊ ಪ್ರತಿಕ್ರಿಯೆ ನೀಡಿರುವ ಅವರು, ‘ನನ್ನ ಗೆಲುವು ಸಹಿಸಲಾಗದವರು ಉದ್ದೇಶಪೂರ್ವಕ ವಾಲ್ಮೀಕಿ ಸಮುದಾಯದ ವಿರೋಧಿ ಎಂಬಂತೆ ಬಿಂಬಿಸಿದ್ದಾರೆ. ನಾನು ಯಾರನ್ನೂ ಉದ್ದೇಶಿಸಿ ಅಲ್ಲಿ ಮಾತನಾಡಿಲ್ಲ. ಅದಾಗಿಯೂ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.</p><p>ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು. ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.</p><p>ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಅದನ್ನು ಆಧಾರವಾಗಿಟ್ಟುಕೊಂಡು ಸಮಾಜದ ಮುಖಂಡ ರಾಜಶೇಖರ ತಳವಾರ ಕ್ಯಾಂಪ್ ಠಾಣೆಗೆ ದೂರು ನೀಡಿದ್ದಾರೆ.</p><p>ಅಲ್ಲದೇ, ಸೋಮವಾರ (ಅ.20) ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ.</p>.<h3><strong>ಹೇಳಿಕೆ ತಿರುಚಲಾಗಿದೆ: ರಮೇಶ ಕತ್ತಿ</strong></h3><p>‘ಬಿಡಿಸಿಸಿ ಚುನಾವಣೆಯಲ್ಲಿ ಗೆದ್ದ ಮೇಲೆ ಅಭಿಮಾನಿಗಳು ಡಾಲ್ಬಿ ಸಂಗೀತ ಹಚ್ಚಿ ಮೆರವಣಿಗೆ ಮಾಡಲು ಒತ್ತಾಯಿಸಿದರು. ಆಗ ನಾನು ಬ್ಯಾಡರೋ (ಬೇಡ) ಎಂದೆ. ಈ ಹೇಳಿಕೆ ತಿರುಚಿ ಜಾತಿ ನಿಂದನೆ ಎಂದು ವಿಡಿಯೊ ವೈರಲ್ ಮಾಡಿದ್ದಾರೆ’ ಎಂದು ಮಾಜಿ ಸಂಸದರೂ ಆದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.</p><p>ವಿಡಿಯೊ ಪ್ರತಿಕ್ರಿಯೆ ನೀಡಿರುವ ಅವರು, ‘ನನ್ನ ಗೆಲುವು ಸಹಿಸಲಾಗದವರು ಉದ್ದೇಶಪೂರ್ವಕ ವಾಲ್ಮೀಕಿ ಸಮುದಾಯದ ವಿರೋಧಿ ಎಂಬಂತೆ ಬಿಂಬಿಸಿದ್ದಾರೆ. ನಾನು ಯಾರನ್ನೂ ಉದ್ದೇಶಿಸಿ ಅಲ್ಲಿ ಮಾತನಾಡಿಲ್ಲ. ಅದಾಗಿಯೂ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>