‘ಹಿಂದೆ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚೆನ್ನಾಗಿದ್ದ ರಮೇಶ, ಇಡಿ (ಜಾರಿ ನಿರ್ದೇಶನಾಲಯ)ಯಿಂದ ತಪ್ಪಿಸಿಕೊಳ್ಳಲು ಬಿಜೆಪಿಯತ್ತ ವಾಲಿದರೇ’ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆತ ಆರ್ಥಿಕವಾಗಿ ಖಾಲಿಯಾಗಿದ್ದಾನೆ. ದಿವಾಳಿಯಾಗಿದ್ದಾನೆ. ಆತನ ಬಳಿ ಏನೂ ಇಲ್ಲ. ಬಹಳ ಸಾಲ ಮಾಡಿಕೊಂಡಿದ್ದೇನೆ ಎಂದು ಈಚೆಗೆ ಗೋಕಾಕದಲ್ಲಿ ನಡೆದ ಸಮಾವೇಶದಲ್ಲೇ ಹೇಳಿಕೊಂಡಿದ್ದಾನೆ. ಎಲ್ಲವನ್ನೂ ಅವನ ಅಳಿಯ ಅಂಬಿರಾವ್ ಪಾಟೀಲ ತೆಗೆದುಕೊಂಡು ಹೋಗಿದ್ದಾನೆ’ ಎಂದು ವ್ಯಂಗ್ಯವಾಗಿ ಹೇಳಿದರು.