ಗೋಕಾಕದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿರೋಧ ಪಕ್ಷ, ಆಡಳಿತ ಪಕ್ಷ ಹಾಗೂ ಜನರ ಆಗ್ರಹದಂತೆ ರಾಜೀನಾಮೆ ನೀಡಿದ್ದಾರೆ. ಈಗ
ನೈತಿಕತೆಯ ವಿಚಾರ ಮುಗಿದಿದೆ. ಇನ್ನೇನಿದ್ದರೂ ಕಾನೂನು ಹೋರಾಟವಷ್ಟೆ. ಆ ಸಿ.ಡಿ. ನಕಲಿಯೋ, ಅಸಲಿಯೋ ಎನ್ನುವುದನ್ನು ಪೊಲೀಸರು ತನಿಖೆ ಮಾಡಬೇಕು. ಸತ್ಯ ಬಯಲಿಗೆಳೆಯಬೇಕು’ ಎಂದರು.