<p><strong>ಬೆಳಗಾವಿ:</strong> ಸಮೀಪದ ರಾಣಿ ಚನ್ನಮ್ಮ ಮೃಗಾಲಯಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಕೃಷ್ಣಮೃಗಗಳ ಸಾವಿನ ಕುರಿತು ವಿವರ ಪಡೆದರು. ಮೃಗಾಲಯದ ಪ್ರಾಣಿಗಳ ಪಾಲನೆ- ಪೋಷಣೆ ಬಗ್ಗೆ ಪರಿಶೀಲನೆ ನಡೆಸಿ, ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.ಬೆಳಗಾವಿ | ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 31ಕ್ಕೆ ಏರಿಕೆ.<p>ಕೃಷ್ಣ ಮೃಗಾಯಲಕ್ಕೆ ಬಂದ ಈ ಕಾಯಿಲೆ ಬೇರೆ ಪ್ರಾಣಿಗಳಿಗೆ ತಗಲುವ ಸಾಧ್ಯತೆ ಇದ್ದರೆ, ಮುಂಜಾಗೃತೆಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ಎಂದು ಸಚಿವ ಸೂಚಿಸಿದರು. ಈ ಸೋಂಕು ಬೇರೆ ಪ್ರಾಣಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಸ್ಪಷ್ಟನೆ ನೀಡಿದರು.</p>.ಬೆಳಗಾವಿ: ಮುಂದುವರಿದ ಕೃಷ್ಣಮೃಗಗಳ ಸಾವಿನ ಸರಣಿ– ಕಾರಣ ಏನು?.<p>ಬೆಂಗಳೂರಿನಿಂದ ಬಂದ ನುರಿತ ವೈದ್ಯರ ತಂಡ ಮೃಗಾಯದಲ್ಲಿ ಕೃಷ್ಣಮೃಗಗಳ ಚಿಕಿತ್ಸೆ ನೀಡಿದೆ. ಈ ಕಾಯಿಲೆ ಬಗ್ಗೆ ಲಾಬ್ ನಿಂದ ವರದಿ ಕೂಡ ಪಡೆಯಲಾಗಿದೆ. ಸದ್ಯ ಇರುವ ಹುಲಿ, ಸಿಂಹಗಳ ಸೇರಿದಂತೆ ಇನ್ನುಳಿದ ಪ್ರಾಣಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರಾಣಿಗಳ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.</p><p>ಬೆಳಗಾವಿ ಎಸಿಎಪ್ ನಾಗರಾಜ ಬಾಳೇಹೂಸೂರ, ಕರ್ನಾಟಕ ಮೃಗಾಯದ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್, ಸಿಸಿಎಫ್ ಮಂಜುನಾಥ ಚವ್ಹಾನ , ಡಿಎಪ್ಓ ಕ್ರಾಂತಿ ಎನ್. ಇ, ವೈದ್ಯರಾದ ಪ್ರಯಾಗ್ ಹಾಗೂ ಮೃಗಾಲಯದ ಸಿಬ್ಬಂದಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಸಮೀಪದ ರಾಣಿ ಚನ್ನಮ್ಮ ಮೃಗಾಲಯಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಕೃಷ್ಣಮೃಗಗಳ ಸಾವಿನ ಕುರಿತು ವಿವರ ಪಡೆದರು. ಮೃಗಾಲಯದ ಪ್ರಾಣಿಗಳ ಪಾಲನೆ- ಪೋಷಣೆ ಬಗ್ಗೆ ಪರಿಶೀಲನೆ ನಡೆಸಿ, ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.ಬೆಳಗಾವಿ | ಮತ್ತೊಂದು ಕೃಷ್ಣಮೃಗ ಸಾವು; ಸಾವಿನ ಸಂಖ್ಯೆ 31ಕ್ಕೆ ಏರಿಕೆ.<p>ಕೃಷ್ಣ ಮೃಗಾಯಲಕ್ಕೆ ಬಂದ ಈ ಕಾಯಿಲೆ ಬೇರೆ ಪ್ರಾಣಿಗಳಿಗೆ ತಗಲುವ ಸಾಧ್ಯತೆ ಇದ್ದರೆ, ಮುಂಜಾಗೃತೆಯಿಂದ ವೈದ್ಯಕೀಯ ಚಿಕಿತ್ಸೆ ನೀಡಿ ಎಂದು ಸಚಿವ ಸೂಚಿಸಿದರು. ಈ ಸೋಂಕು ಬೇರೆ ಪ್ರಾಣಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಸ್ಪಷ್ಟನೆ ನೀಡಿದರು.</p>.ಬೆಳಗಾವಿ: ಮುಂದುವರಿದ ಕೃಷ್ಣಮೃಗಗಳ ಸಾವಿನ ಸರಣಿ– ಕಾರಣ ಏನು?.<p>ಬೆಂಗಳೂರಿನಿಂದ ಬಂದ ನುರಿತ ವೈದ್ಯರ ತಂಡ ಮೃಗಾಯದಲ್ಲಿ ಕೃಷ್ಣಮೃಗಗಳ ಚಿಕಿತ್ಸೆ ನೀಡಿದೆ. ಈ ಕಾಯಿಲೆ ಬಗ್ಗೆ ಲಾಬ್ ನಿಂದ ವರದಿ ಕೂಡ ಪಡೆಯಲಾಗಿದೆ. ಸದ್ಯ ಇರುವ ಹುಲಿ, ಸಿಂಹಗಳ ಸೇರಿದಂತೆ ಇನ್ನುಳಿದ ಪ್ರಾಣಿಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ ಪ್ರಾಣಿಗಳ ಆರೋಗ್ಯ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ವಿವರಿಸಿದರು.</p><p>ಬೆಳಗಾವಿ ಎಸಿಎಪ್ ನಾಗರಾಜ ಬಾಳೇಹೂಸೂರ, ಕರ್ನಾಟಕ ಮೃಗಾಯದ ಪ್ರಾಧಿಕಾರಿದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್, ಸಿಸಿಎಫ್ ಮಂಜುನಾಥ ಚವ್ಹಾನ , ಡಿಎಪ್ಓ ಕ್ರಾಂತಿ ಎನ್. ಇ, ವೈದ್ಯರಾದ ಪ್ರಯಾಗ್ ಹಾಗೂ ಮೃಗಾಲಯದ ಸಿಬ್ಬಂದಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>