ಮಗು ಕೆಮ್ಮು, ಉಸಿರಾಟದಲ್ಲಿ ತೊಂದರೆ, ತೀವ್ರವಾದ ಬೆವರು ಮೊದಲಾದ ತೊಂದರೆ ಅನುಭವಿಸುತ್ತಿತ್ತು. ಖಾನಾಪುರದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಕೆಎಲ್ಇ ಆಸ್ಪತ್ರೆಗೆ ಕಳುಹಿಸಿದ್ದರು. ಸಮಗ್ರ ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ರಂದ್ರ ಇರುವುದು ಕಂಡು ಬಂದಿತ್ತು. ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿ, ಮಗುವಿನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಗುವನ್ನು ಗಮನಿಸಿದ ರೋಟರಿ ಕ್ಲಬ್ ಸದಸ್ಯರು ತಪಾಸಣೆಗೆ ಒಳಪಡಿಸಿ, ಶಸ್ತ್ರಚಿಕಿತ್ಸೆಗಾಗಿ
ಕಳುಹಿಸಿಕೊಟ್ಟಿದ್ದರು ಎಂದು ಪ್ರಕಟಣೆ ತಿಳಿಸಿದೆ.