‘ಕಾಂಗ್ರೆಸ್ನವರದು ಗೂಂಡಾ ಸಂಸ್ಕೃತಿ. ಅಧಿಕಾರಕ್ಕೆ ಬಂದಾಗಲೆಲ್ಲ ಅವರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಹಲ್ಲೆ ನಡೆಸುತ್ತಾರೆ. 2014ರಿಂದ 2018ರವರೆಗೆ 45ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆರು ತಿಂಗಳಲ್ಲಿ ರಾಜ್ಯದಲ್ಲಿ ಕಲಬುರಗಿ, ಬೆಳಗಾವಿ, ಮಂಗಳೂರು, ಉಡುಪಿಯಲ್ಲಿ ಇಂತಹ ಪ್ರಕರಣ ನಡೆದಿವೆ. ಅವರು ಎಷ್ಟೇ ಗೂಂಡಾಗಿರಿ ಮಾಡಿದರೂ ನಮ್ಮ ಕಾರ್ಯಕರ್ತರನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದು ನಮಗೆ ಗೊತ್ತಿದೆ’ ಎಂದರು.