<p><strong>ಬೆಳಗಾವಿ</strong>: ಇಲ್ಲಿನ ಶಹಾಪುರದಲ್ಲಿರುವ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಬಿ.ಎಂ. ಕಂಕಣವಾಡಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ರಥಸಪ್ತಮಿ ಮತ್ತು ಅಗ್ನಿಹೋತ್ರ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾಲೇಜಿನ ಸ್ವಸ್ಥವೃತ್ತ್ ವಿಭಾಗ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನಾ ಘಟಕದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು 24 ಸುತ್ತಿನ ಸೂರ್ಯ ನಮಸ್ಕಾರ ಅಭ್ಯಾಸವನ್ನು ಹಾಗೂ ಅಗ್ನಿಹೋತ್ರ ವಿಧಿಯನ್ನು ಮಾಡಿದರು.</p>.<p>ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಡಾ.ಅಶೋಕ ಪಾಟೀಲ ಸ್ವಾಗತಿಸಿದರು. ಕುಷ್ಬೂ ನಿರೂಪಿಸಿದರು. ಡಾ.ಆಮಲ್ ಚಂದ್ರನ್ ವಂದಿಸಿದರು.</p>.<p class="Briefhead"><strong>‘ಸೂರ್ಯ ನಮಸ್ಕಾರದಿಂದ ಆರೋಗ್ಯ ವೃದ್ಧಿ’</strong></p>.<p>ಬೆಳಗಾವಿನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ ಬೆಳಗಾವಿ ಶಾಖೆ ಸಹಯೋಗದಲ್ಲಿ ರಥಸಪ್ತಮಿ ನಿಮಿತ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.</p>.<p>ವಿವೇಕಾನಂದ ಕೇಂದ್ರ ಶಾಖೆಯ ಸಂಯೋಜಕ ಅಶೋಕ ಉಳ್ಳೇಗಡ್ಡಿ ಉದ್ಘಾಟಿಸಿ ಮಾತನಾಡಿ, ‘ಸೂರ್ಯ ನಮಸ್ಕಾರ ಮಾಡುವುದರಿಂದ ಸೂರ್ಯನ ಕಿರಣಗಳು ನಮ್ಮ ಶರೀರದ ಮೇಲೆ ಬಿದ್ದು ವಿಟಮಿನ್ ಡಿ ದೊರೆಯುತ್ತದೆ. ಇದರಿಂದ ಸದೃಢ ದೇಹವನ್ನು ಹೊಂದಬಹುದು. ಆಗ ಮನಸ್ಸು ಕೂಡ ಚೆನ್ನಾಗಿರುತ್ತದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಂ. ಜಯಪ್ಪ, ‘ನಾವು ಪರಿಸರ ಸ್ನೇಹಿ ಜೀವನ ಕ್ರಮವನ್ನು ರೂಢಿಸಿಕೊಳ್ಳಬೇಕು. ಯೋಗ, ಧ್ಯಾನದಂತಹ ಚಟುವಟಿಕೆಗಳನ್ನು ನಿತ್ಯವೂ ಮಾಡಬೇಕು. ಉತ್ತಮ ಆಹಾರ ಪದ್ಧತಿ ಅನುಸರಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿವೇಕಾನಂದ ಕೇಂದ್ರದ ಸಹ ಸಂಯೋಜಕ ಕಿಶೋರ ಕಾಕಡೆ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ ಗಸ್ತಿ ಮಾತನಾಡಿದರು.</p>.<p>ಯೋಗ ಗುರು ಎಸ್.ಎಸ್. ಸಾರಾಪುರೆ ಅವರನ್ನು ಸನ್ಮಾನಿಸಲಾಯಿತು. ಚಲನಚಿತ್ರ ನಿರ್ಮಾಪಕ ಸುಧೀರ ಮುನ್ನೋಳ್ಳಿ, ಉಪ ಪ್ರಾಚಾರ್ಯ ಅನಿಲ ರಾಮದುರ್ಗ, ವಿವೇಕಾನಂದ ಕೇಂದ್ರದ ಸದಸ್ಯರಾದ ನಿಖಿಲ ನರಗುಂದಕರ, ರಾಜೇಶ್ವರಿ ಅಕ್ಕಿ, ಮಲ್ಲಿಕಾರ್ಜುನ ಜುಗಲೆ, ಎನ್ಎಸ್ಎಸ್, ರೆಡ್ಕ್ರಾಸ್ ಶಾಖೆಯವರು ಪಾಲ್ಗೊಂಡಿದ್ದರು.</p>.<p>ನವ್ಯಶ್ರೀ ಶೆಟ್ಟಿ ಪ್ರಾರ್ಥಿಸಿದರು. ಸಚಿನ ಹಿರೇಮಠ ವಂದಿಸಿದರು. ಸಂಗೀತಾ ಲಮಾಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಶಹಾಪುರದಲ್ಲಿರುವ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಬಿ.ಎಂ. ಕಂಕಣವಾಡಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ರಥಸಪ್ತಮಿ ಮತ್ತು ಅಗ್ನಿಹೋತ್ರ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಕಾಲೇಜಿನ ಸ್ವಸ್ಥವೃತ್ತ್ ವಿಭಾಗ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಯೋಜನಾ ಘಟಕದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು 24 ಸುತ್ತಿನ ಸೂರ್ಯ ನಮಸ್ಕಾರ ಅಭ್ಯಾಸವನ್ನು ಹಾಗೂ ಅಗ್ನಿಹೋತ್ರ ವಿಧಿಯನ್ನು ಮಾಡಿದರು.</p>.<p>ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎಸ್. ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಡಾ.ಅಶೋಕ ಪಾಟೀಲ ಸ್ವಾಗತಿಸಿದರು. ಕುಷ್ಬೂ ನಿರೂಪಿಸಿದರು. ಡಾ.ಆಮಲ್ ಚಂದ್ರನ್ ವಂದಿಸಿದರು.</p>.<p class="Briefhead"><strong>‘ಸೂರ್ಯ ನಮಸ್ಕಾರದಿಂದ ಆರೋಗ್ಯ ವೃದ್ಧಿ’</strong></p>.<p>ಬೆಳಗಾವಿನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಕನ್ಯಾಕುಮಾರಿಯ ವಿವೇಕಾನಂದ ಕೇಂದ್ರ ಬೆಳಗಾವಿ ಶಾಖೆ ಸಹಯೋಗದಲ್ಲಿ ರಥಸಪ್ತಮಿ ನಿಮಿತ್ತ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.</p>.<p>ವಿವೇಕಾನಂದ ಕೇಂದ್ರ ಶಾಖೆಯ ಸಂಯೋಜಕ ಅಶೋಕ ಉಳ್ಳೇಗಡ್ಡಿ ಉದ್ಘಾಟಿಸಿ ಮಾತನಾಡಿ, ‘ಸೂರ್ಯ ನಮಸ್ಕಾರ ಮಾಡುವುದರಿಂದ ಸೂರ್ಯನ ಕಿರಣಗಳು ನಮ್ಮ ಶರೀರದ ಮೇಲೆ ಬಿದ್ದು ವಿಟಮಿನ್ ಡಿ ದೊರೆಯುತ್ತದೆ. ಇದರಿಂದ ಸದೃಢ ದೇಹವನ್ನು ಹೊಂದಬಹುದು. ಆಗ ಮನಸ್ಸು ಕೂಡ ಚೆನ್ನಾಗಿರುತ್ತದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಎಂ. ಜಯಪ್ಪ, ‘ನಾವು ಪರಿಸರ ಸ್ನೇಹಿ ಜೀವನ ಕ್ರಮವನ್ನು ರೂಢಿಸಿಕೊಳ್ಳಬೇಕು. ಯೋಗ, ಧ್ಯಾನದಂತಹ ಚಟುವಟಿಕೆಗಳನ್ನು ನಿತ್ಯವೂ ಮಾಡಬೇಕು. ಉತ್ತಮ ಆಹಾರ ಪದ್ಧತಿ ಅನುಸರಿಸಬೇಕು’ ಎಂದು ಸಲಹೆ ನೀಡಿದರು.</p>.<p>ವಿವೇಕಾನಂದ ಕೇಂದ್ರದ ಸಹ ಸಂಯೋಜಕ ಕಿಶೋರ ಕಾಕಡೆ ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ ಗಸ್ತಿ ಮಾತನಾಡಿದರು.</p>.<p>ಯೋಗ ಗುರು ಎಸ್.ಎಸ್. ಸಾರಾಪುರೆ ಅವರನ್ನು ಸನ್ಮಾನಿಸಲಾಯಿತು. ಚಲನಚಿತ್ರ ನಿರ್ಮಾಪಕ ಸುಧೀರ ಮುನ್ನೋಳ್ಳಿ, ಉಪ ಪ್ರಾಚಾರ್ಯ ಅನಿಲ ರಾಮದುರ್ಗ, ವಿವೇಕಾನಂದ ಕೇಂದ್ರದ ಸದಸ್ಯರಾದ ನಿಖಿಲ ನರಗುಂದಕರ, ರಾಜೇಶ್ವರಿ ಅಕ್ಕಿ, ಮಲ್ಲಿಕಾರ್ಜುನ ಜುಗಲೆ, ಎನ್ಎಸ್ಎಸ್, ರೆಡ್ಕ್ರಾಸ್ ಶಾಖೆಯವರು ಪಾಲ್ಗೊಂಡಿದ್ದರು.</p>.<p>ನವ್ಯಶ್ರೀ ಶೆಟ್ಟಿ ಪ್ರಾರ್ಥಿಸಿದರು. ಸಚಿನ ಹಿರೇಮಠ ವಂದಿಸಿದರು. ಸಂಗೀತಾ ಲಮಾಣಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>