<p><strong>ಬೆಳಗಾವಿ:</strong> ‘ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯುಮಾರ್ಚ್ನಿಂದ ಹಮ್ಮಿಕೊಂಡಿರುವ ಹಸಿದವರತ್ತ ನಮ್ಮ ಚಿತ್ತ ಅಭಿಯಾನವು ಸಂಕಷ್ಟದಲ್ಲಿರುವ ಕುಟುಂಬಗಳ ಹಸಿವನ್ನು ನೀಗಿಸಿದೆ. ರಾಜ್ಯದಲ್ಲಿಯೇ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ’ ಎಂದು ಸಮಾಜ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಬಾಸೂರು ತಿಪ್ಪೇಸ್ವಾಮಿ ಹೇಳಿದರು.</p>.<p>ಇಲ್ಲಿನ ಆಂಜನೇಯ ನಗರದಲ್ಲಿ ಬುಧವಾರ ಕನ್ನಡ ಕ್ರಿಯಾ ಸಮಿತಿಯು ಆಯೋಜಿಸಿದ್ದ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಲಾಕ್ಡೌನ್ ಸಮಯದಲ್ಲಿ ಸಾವಿರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ನಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಬಾರದ ಸಮಯದಲ್ಲಿ ಕ್ರಿಯಾ ಸಮಿತಿಯವರು ಆಹಾರ ಧಾನ್ಯವನ್ನು ದಾನಿಗಳಿಂದ ಸಂಗ್ರಹಿಸಿ ಹಸಿದವರಿಗೆ ಹಂಚಿದ್ದು ದಾಖಲೆಯಾಗಿ ಉಳಿಯಲಿದೆ’ ಎಂದರು.</p>.<p>ಕರವೇ ರಾಜ್ಯ ಘಟಕದ ಸಂಚಾಲಕ ಮಹಾದೇವ ತಳವಾರ, ‘ಈಭಿಯಾನವು ಕನ್ನಡ ಸಂಘಟನೆಗಳಿಗೆ ಒಂದು ಮಾದರಿ ಹಾಗೂ ದಾರಿದೀಪ’ ಎಂದು ಶ್ಲಾಘಿಸಿದರು.</p>.<p>ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ‘ಮಾರ್ಚ್ 23ರಂದು ಆರಂಭವಾದ ಈ ಅಭಿಯಾನವು ಜೂನ್ 5ಕ್ಕೆ 75 ದಿನಗಳನ್ನು ಪೂರೈಸುತ್ತದೆ. ಅಭಿಯಾನ ನಿಲ್ಲಿಸಬೇಕೋ, ಮುಂದುವರಿಸಬೇಕೋ ಎನ್ನುವ ಗೊಂದಲದಲ್ಲಿದ್ದೇವೆ’ ಎಂದರು.</p>.<p>ಮುಖಂಡ ರಾಜಶೇಖರ ಭಾವಿಕಟ್ಟಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಶಂಕರ ಬಾಗೇವಾಡಿ, ಕನ್ನಡ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p>ಗೋಪಾಲ ಖಟಾವಕರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯುಮಾರ್ಚ್ನಿಂದ ಹಮ್ಮಿಕೊಂಡಿರುವ ಹಸಿದವರತ್ತ ನಮ್ಮ ಚಿತ್ತ ಅಭಿಯಾನವು ಸಂಕಷ್ಟದಲ್ಲಿರುವ ಕುಟುಂಬಗಳ ಹಸಿವನ್ನು ನೀಗಿಸಿದೆ. ರಾಜ್ಯದಲ್ಲಿಯೇ ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ’ ಎಂದು ಸಮಾಜ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಬಾಸೂರು ತಿಪ್ಪೇಸ್ವಾಮಿ ಹೇಳಿದರು.</p>.<p>ಇಲ್ಲಿನ ಆಂಜನೇಯ ನಗರದಲ್ಲಿ ಬುಧವಾರ ಕನ್ನಡ ಕ್ರಿಯಾ ಸಮಿತಿಯು ಆಯೋಜಿಸಿದ್ದ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಲಾಕ್ಡೌನ್ ಸಮಯದಲ್ಲಿ ಸಾವಿರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೊರೊನಾ ವೈರಸ್ನಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಬಾರದ ಸಮಯದಲ್ಲಿ ಕ್ರಿಯಾ ಸಮಿತಿಯವರು ಆಹಾರ ಧಾನ್ಯವನ್ನು ದಾನಿಗಳಿಂದ ಸಂಗ್ರಹಿಸಿ ಹಸಿದವರಿಗೆ ಹಂಚಿದ್ದು ದಾಖಲೆಯಾಗಿ ಉಳಿಯಲಿದೆ’ ಎಂದರು.</p>.<p>ಕರವೇ ರಾಜ್ಯ ಘಟಕದ ಸಂಚಾಲಕ ಮಹಾದೇವ ತಳವಾರ, ‘ಈಭಿಯಾನವು ಕನ್ನಡ ಸಂಘಟನೆಗಳಿಗೆ ಒಂದು ಮಾದರಿ ಹಾಗೂ ದಾರಿದೀಪ’ ಎಂದು ಶ್ಲಾಘಿಸಿದರು.</p>.<p>ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ‘ಮಾರ್ಚ್ 23ರಂದು ಆರಂಭವಾದ ಈ ಅಭಿಯಾನವು ಜೂನ್ 5ಕ್ಕೆ 75 ದಿನಗಳನ್ನು ಪೂರೈಸುತ್ತದೆ. ಅಭಿಯಾನ ನಿಲ್ಲಿಸಬೇಕೋ, ಮುಂದುವರಿಸಬೇಕೋ ಎನ್ನುವ ಗೊಂದಲದಲ್ಲಿದ್ದೇವೆ’ ಎಂದರು.</p>.<p>ಮುಖಂಡ ರಾಜಶೇಖರ ಭಾವಿಕಟ್ಟಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಶಂಕರ ಬಾಗೇವಾಡಿ, ಕನ್ನಡ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p>ಗೋಪಾಲ ಖಟಾವಕರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>