<p>ರಾಯಬಾಗ: ಮಡಿವಾಳ ಮಾಚಿದೇವರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ, ಸಮುದಾಯದ ಬಾಂಧವರು ರಾಯಬಾಗ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಸರ್ಕಾರ ಮಡಿವಾಳ ಮಾಚಿದೇವರ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದು, ಸರ್ಕಾರದಿಂದ ಸಿಗಬೇಕಾದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.</p>.<p>ದೇಶದ 18 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆ ರಾಜ್ಯಗಳಲ್ಲಿ ಸಮುದಾಯದವರು ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದುವರೆದಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವುದೇ ರೀತಿಯ ಮಾನ್ಯತೆ ನೀಡದಿರುವುದು ವಿಷಾದನೀಯ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಉತ್ತರ ಕರ್ನಾಟಕದ ವಿವಿಧ ಸಂಘಟನೆಗಳು ಡಾ. ಅನ್ನಪೂರ್ಣ ವರದಿಯನ್ನು ಜಾರಿಗೆ ತರಲು ಒತ್ತಾಯಿಸುತ್ತಿದ್ದು, ರಾಜ್ಯದ 19 ಮಂತ್ರಿಗಳು ಹಾಗೂ 137 ಶಾಸಕರಿಂದ ಶಿಫಾರಸ್ಸು ಪತ್ರಗಳನ್ನು ಪಡೆದಿದ್ದರೂ, ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರಲಾಗಿದೆ.</p>.<p>ಗುಂಡೂರಾವ ಪರೀಟ,ಮೋಹನ ಪರೀಟ, ಮೋಹನ ಮಡಿವಾಳ, ರಾಜಕುಮಾರ ಮಡಿವಾಳ, ಸಂಜೀವಕುಮಾರ ಮಡಿವಾಳ, ರೇವಪ್ಪ ಮಡಿವಾಳ,ಸಚಿನ್ ಪರಿಟ್, ವಿಜಯ ಪರೀಟ, ಗಣೇಶ ಮಡಿವಾಳ, ರಾಜು ಮಡಿವಾಳ, ಸುನೀಲ ಮಡಿವಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-251987850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಬಾಗ: ಮಡಿವಾಳ ಮಾಚಿದೇವರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ, ಸಮುದಾಯದ ಬಾಂಧವರು ರಾಯಬಾಗ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಸರ್ಕಾರ ಮಡಿವಾಳ ಮಾಚಿದೇವರ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದು, ಸರ್ಕಾರದಿಂದ ಸಿಗಬೇಕಾದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.</p>.<p>ದೇಶದ 18 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆ ರಾಜ್ಯಗಳಲ್ಲಿ ಸಮುದಾಯದವರು ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಮುಂದುವರೆದಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವುದೇ ರೀತಿಯ ಮಾನ್ಯತೆ ನೀಡದಿರುವುದು ವಿಷಾದನೀಯ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಉತ್ತರ ಕರ್ನಾಟಕದ ವಿವಿಧ ಸಂಘಟನೆಗಳು ಡಾ. ಅನ್ನಪೂರ್ಣ ವರದಿಯನ್ನು ಜಾರಿಗೆ ತರಲು ಒತ್ತಾಯಿಸುತ್ತಿದ್ದು, ರಾಜ್ಯದ 19 ಮಂತ್ರಿಗಳು ಹಾಗೂ 137 ಶಾಸಕರಿಂದ ಶಿಫಾರಸ್ಸು ಪತ್ರಗಳನ್ನು ಪಡೆದಿದ್ದರೂ, ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದು ದೂರಲಾಗಿದೆ.</p>.<p>ಗುಂಡೂರಾವ ಪರೀಟ,ಮೋಹನ ಪರೀಟ, ಮೋಹನ ಮಡಿವಾಳ, ರಾಜಕುಮಾರ ಮಡಿವಾಳ, ಸಂಜೀವಕುಮಾರ ಮಡಿವಾಳ, ರೇವಪ್ಪ ಮಡಿವಾಳ,ಸಚಿನ್ ಪರಿಟ್, ವಿಜಯ ಪರೀಟ, ಗಣೇಶ ಮಡಿವಾಳ, ರಾಜು ಮಡಿವಾಳ, ಸುನೀಲ ಮಡಿವಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-21-251987850</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>