<p><strong>ಬೆಳಗಾವಿ: </strong>‘ಸಂಶೋಧನಾ ಪ್ರಕಟಣೆಗಳಲ್ಲಿ ನೈತಿಕತೆಯ ಗುಣಮಟ್ಟ ಕಾಯ್ದುಕೊಳ್ಳುವುದು ಅತ್ಯವಶ್ಯವಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಹೇಳಿದರು.</p>.<p>ವಿಶ್ವವಿದ್ಯಾಲಯದ ಪ್ರಸಾರಾಂಗವು ದಶಮಾನೋತ್ಸವ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಆನ್ಲೈನ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂಶೋಧನೆ ಹಾಗೂ ಪ್ರಕಟಣೆಗಾಗಿ ಆಕರ ನಿರ್ವಹಣೆಯ ಜ್ಞಾನವೇ ಸದ್ಯದ ಆದ್ಯತೆಯಾಗಿದೆ. ಆಧುನಿಕ ತಂತ್ರಾಂಶಗಳ ಸಮರ್ಪಕ ಬಳಕೆ ಮೂಲಕ ಸಂಶೋಧನೆಯ ಭಿನ್ನ ಉಪಕ್ರಮಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡು ನವ ಆವಿಷ್ಕಾರಗಳತ್ತ ಮುಖ ಮಾಡಬೇಕಿದೆ. ಇದರೊಂದಿಗೆ ವಿದ್ವತ್ಪೂರ್ಣ ಬರವಣಿಗೆಯೂ ಅಗತ್ಯ’ ಎಂದರು.</p>.<p>ತುಮಕೂರು ವಿಶ್ವವಿದ್ಯಾಲಯದ ರೂಪೇಶಕುಮಾರ ‘ಸಂಶೋಧನೆ ಹಾಗೂ ಪ್ರಕಟಣೆಯಲ್ಲಿ ನೈತಿಕ ಗುಣಮಟ್ಟ ಕಾಯುವಿಕೆ’ ಮತ್ತು ಗೋವಾ ವಿಶ್ವವಿದ್ಯಾಲಯದ ಡಾ.ಗೋಪುಕುಮಾರ ‘ಸಂಶೋಧನೆ ಹಾಗೂ ಪ್ರಕಟಣೆಗಾಗಿ ಆಕರ ನಿರ್ವಹಣೆಯ ತಂತ್ರಗಳು’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ‘ಶೈಕ್ಷಣಿಕ ಅಭಿವೃದ್ಧಿಯ ಭಾಗವಾಗಿ ಪರಿಗಣಿಸಲಾಗುವ ಸಂಶೋಧನೆಯು ಉತ್ಕೃಷ್ಟ ಜ್ಞಾನ ಶಾಖೆಯಾಗಿದೆ. ಆಕರಗಳ ನೈಜ ಶೋಧದಿಂದ ಮಾತ್ರ ಸದ್ಯದ ವಿದ್ಯಮಾನಗಳನ್ನು ಅರಿಯಲು ಸಾಧ್ಯ’ ಎಂದರು.</p>.<p>ಪ್ರಸಾರಾಂಗದ ನಿರ್ದೇಶಕ ಪ್ರೊ.ಅಶೋಕ ಡಿಸೋಜಾ ಮಾತನಾಡಿದರು. ಸಮಾಜವಿಜ್ಞಾನ ವಿಭಾಗದ ಡಾ.ಸುಮಂತ ಹಿರೇಮಠ, ರಸಾಯನವಿಜ್ಞಾನ ವಿಭಾಗದ ಡಾ.ಪಿ.ಎಂ. ಗುರುಬಸವರಾಜ ಕಾರ್ಯಾಗಾರ ನಡೆಸಿಕೊಟ್ಟರು. ಸಹಸಂಘಟನಾ ಕಾರ್ಯದರ್ಶಿ ಡಾ.ಫಯಾಜ್ ಅಹಮ್ಮದ್ ಇಳಕಲ್, ಕಂಪ್ಯೂಟರ್ ವಿಭಾಗದ ಸಂತೋಷ ರಜಪೂತ ತಾಂತ್ರಿಕ ವಿಷಯಗಳನ್ನು ನಿರ್ವಹಿಸಿದರು.</p>.<p>ಪ್ರಸಾರಾಂಗದ ಸಹಾಯಕ ನಿರ್ದೇಶಕಿ ಡಾ.ಮೈತ್ರೇಯಿಣೆ ಗದಿಗೆಪ್ಪಗೌಡರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಸಂಶೋಧನಾ ಪ್ರಕಟಣೆಗಳಲ್ಲಿ ನೈತಿಕತೆಯ ಗುಣಮಟ್ಟ ಕಾಯ್ದುಕೊಳ್ಳುವುದು ಅತ್ಯವಶ್ಯವಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಹೇಳಿದರು.</p>.<p>ವಿಶ್ವವಿದ್ಯಾಲಯದ ಪ್ರಸಾರಾಂಗವು ದಶಮಾನೋತ್ಸವ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಆನ್ಲೈನ್ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಂಶೋಧನೆ ಹಾಗೂ ಪ್ರಕಟಣೆಗಾಗಿ ಆಕರ ನಿರ್ವಹಣೆಯ ಜ್ಞಾನವೇ ಸದ್ಯದ ಆದ್ಯತೆಯಾಗಿದೆ. ಆಧುನಿಕ ತಂತ್ರಾಂಶಗಳ ಸಮರ್ಪಕ ಬಳಕೆ ಮೂಲಕ ಸಂಶೋಧನೆಯ ಭಿನ್ನ ಉಪಕ್ರಮಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡು ನವ ಆವಿಷ್ಕಾರಗಳತ್ತ ಮುಖ ಮಾಡಬೇಕಿದೆ. ಇದರೊಂದಿಗೆ ವಿದ್ವತ್ಪೂರ್ಣ ಬರವಣಿಗೆಯೂ ಅಗತ್ಯ’ ಎಂದರು.</p>.<p>ತುಮಕೂರು ವಿಶ್ವವಿದ್ಯಾಲಯದ ರೂಪೇಶಕುಮಾರ ‘ಸಂಶೋಧನೆ ಹಾಗೂ ಪ್ರಕಟಣೆಯಲ್ಲಿ ನೈತಿಕ ಗುಣಮಟ್ಟ ಕಾಯುವಿಕೆ’ ಮತ್ತು ಗೋವಾ ವಿಶ್ವವಿದ್ಯಾಲಯದ ಡಾ.ಗೋಪುಕುಮಾರ ‘ಸಂಶೋಧನೆ ಹಾಗೂ ಪ್ರಕಟಣೆಗಾಗಿ ಆಕರ ನಿರ್ವಹಣೆಯ ತಂತ್ರಗಳು’ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕುಲಸಚಿವ ಪ್ರೊ.ಬಸವರಾಜ ಪದ್ಮಶಾಲಿ, ‘ಶೈಕ್ಷಣಿಕ ಅಭಿವೃದ್ಧಿಯ ಭಾಗವಾಗಿ ಪರಿಗಣಿಸಲಾಗುವ ಸಂಶೋಧನೆಯು ಉತ್ಕೃಷ್ಟ ಜ್ಞಾನ ಶಾಖೆಯಾಗಿದೆ. ಆಕರಗಳ ನೈಜ ಶೋಧದಿಂದ ಮಾತ್ರ ಸದ್ಯದ ವಿದ್ಯಮಾನಗಳನ್ನು ಅರಿಯಲು ಸಾಧ್ಯ’ ಎಂದರು.</p>.<p>ಪ್ರಸಾರಾಂಗದ ನಿರ್ದೇಶಕ ಪ್ರೊ.ಅಶೋಕ ಡಿಸೋಜಾ ಮಾತನಾಡಿದರು. ಸಮಾಜವಿಜ್ಞಾನ ವಿಭಾಗದ ಡಾ.ಸುಮಂತ ಹಿರೇಮಠ, ರಸಾಯನವಿಜ್ಞಾನ ವಿಭಾಗದ ಡಾ.ಪಿ.ಎಂ. ಗುರುಬಸವರಾಜ ಕಾರ್ಯಾಗಾರ ನಡೆಸಿಕೊಟ್ಟರು. ಸಹಸಂಘಟನಾ ಕಾರ್ಯದರ್ಶಿ ಡಾ.ಫಯಾಜ್ ಅಹಮ್ಮದ್ ಇಳಕಲ್, ಕಂಪ್ಯೂಟರ್ ವಿಭಾಗದ ಸಂತೋಷ ರಜಪೂತ ತಾಂತ್ರಿಕ ವಿಷಯಗಳನ್ನು ನಿರ್ವಹಿಸಿದರು.</p>.<p>ಪ್ರಸಾರಾಂಗದ ಸಹಾಯಕ ನಿರ್ದೇಶಕಿ ಡಾ.ಮೈತ್ರೇಯಿಣೆ ಗದಿಗೆಪ್ಪಗೌಡರ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>