‘ತ್ಯಾಗರಾಜ ಅವರು ಸುಳ್ಳು ಶೈಕ್ಷಣಿಕ ಪ್ರಮಾಣಪತ್ರ ನೀಡಿ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಮುಖ್ಯಸ್ಥ ಹುದ್ದೆ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಕಾರಣದಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರ್ಟಿಐ ಕಾರ್ಯಕರ್ತ ಸುರೇಂದ್ರ ಉಗಾರೆ ಜುಲೈ 23ರಂದು ಕುಲಪತಿ ಮತ್ತು ಕುಲಸಚಿವರಿಗೆ ಪತ್ರ ಬರೆದಿದ್ದರು. ಯುಜಿಸಿ ಮಾರ್ಗಸೂಚಿ ಅನುಸರಿಸುವಂತೆ ಒತ್ತಾಯಿಸಿದ್ದರು. ಇದನ್ನು ಆಧರಿಸಿ ತನಿಖೆಗೆ ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.