ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಪದಕ ಕೊಡದೆ ಆರ್‌ಸಿಯು ಅವಮಾನ: ಲಕ್ಷ್ಮಿ ಆಕ್ರೋಶ

Last Updated 15 ಅಕ್ಟೋಬರ್ 2020, 13:49 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸದೆ ತಿರಸ್ಕರಿಸಿ ಅವಮಾನಿಸಿದೆ’ ಎಂದು ಶಾಸಕರೂ ಆಗಿರುವ ಕೆಪಿಸಿಸಿ ವಕ್ತಾರೆ ಲಕ್ಷ್ಮಿ ಹೆಬ್ಬಾಳಕರ ಆಕ್ರೋಶ ವ್ಯಕ್ತಪಡಿಸಿದರು.

ತಮ್ಮನ್ನು ಭೇಟಿಯಾದ ವಿದ್ಯಾರ್ಥಿನಿ ಹಾಗೂ ಪೋಷಕರೊಂದಿಗೆ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಸುವರ್ಣ ವಿಧಾನಸೌಧದಲ್ಲಿ ನಡೆದ 8ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಕ್ರಿಮಿನಾಲಜಿ ಕ್ರಿಮಿನಲ್ ಜಸ್ಟಿಸ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದರು. ಅಂತೆಯೇ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯಾ ವಿಭಾಗದಲ್ಲಿ ಚಿನ್ನದ ಪದಕಗಳಿಗೆ ಅರ್ಹತೆ ಪಡೆದಿದ್ದರೂ ವಿವಿಯು ಪರಿಗಣಿಸಿಲ್ಲ. ಇದು ಸರಿಯಲ್ಲ’ ಎಂದು ಹೇಳಿದರು.

‘ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನ ಎನ್ನುವಂತೆ ₹ 1,070 ಡಿ.ಡಿ. ನೀಡಿ ನಿರಾಸೆಗೊಳಿಸಲಾಗಿದೆ. ಇದು ಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT