<p><strong>ಬೆಳಗಾವಿ: </strong>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್ಸಿಯು) ವ್ಯಾಪ್ತಿಯಲ್ಲಿ 2020-21ನೇ ಸಾಲಿಗೆ ಸ್ನಾತಕ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ಗಳಿಗೆ ಪ್ರವೇಶ ಪಡೆಯಲು ಡಿ.1ರಿಂದ ಡಿ.5ರವರೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಈ ಮೊದಲು ನ.10ರಂದು ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಆದರೆ, ದ್ವಿತೀಯ ಪಿಯು ಪೂರಕ ಪರೀಕ್ಷೆಯ ಫಲಿತಾಂಶ ನ. 13ರಂದು ಪ್ರಕಟವಾಗಿತ್ತು. ಆ ಪರೀಕ್ಷೆಯಲ್ಲಿ ತೇರ್ಗಡೆಯಾದ ನೂರಾರು ವಿದ್ಯಾರ್ಥಿಗಳು ಪದವಿ ಕೋರ್ಸ್ಗೆ ಪ್ರವೇಶ ಪಡೆಯಲು ಆಗದೆ, ಒಂದು ವರ್ಷ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿದ್ದರು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ನ.29ರಂದು ‘ಸಿಗದ ಪ್ರವೇಶ: ವಿದ್ಯಾರ್ಥಿಗಳಿಗೆ’ ತೊಂದರೆ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿ ಗಮನಸೆಳೆಯಲಾಗಿತ್ತು.</p>.<p>ಸ್ಪಂದಿಸಿದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರವೇಶದ ಅವಧಿ ವಿಸ್ತರಿಸಿದ್ದಾರೆ.</p>.<p>‘ಈ ಸಾಲಿನಲ್ಲಿ ಇದು ವಿದ್ಯಾರ್ಥಿಗಳಿಗೆ ಕೊನೆಯ ಅವಕಾಶವಾಗಿದೆ. 200–300 ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದನ್ನು ಪರಿಗಣಿಸಿ, ಪ್ರವೇಶ ಅವಧಿ ವಿಸ್ತರಿಸಲಾಗಿದೆ. ಇದನ್ನು ಅವರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕುಲಪತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್ಸಿಯು) ವ್ಯಾಪ್ತಿಯಲ್ಲಿ 2020-21ನೇ ಸಾಲಿಗೆ ಸ್ನಾತಕ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ಗಳಿಗೆ ಪ್ರವೇಶ ಪಡೆಯಲು ಡಿ.1ರಿಂದ ಡಿ.5ರವರೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ಈ ಮೊದಲು ನ.10ರಂದು ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಆದರೆ, ದ್ವಿತೀಯ ಪಿಯು ಪೂರಕ ಪರೀಕ್ಷೆಯ ಫಲಿತಾಂಶ ನ. 13ರಂದು ಪ್ರಕಟವಾಗಿತ್ತು. ಆ ಪರೀಕ್ಷೆಯಲ್ಲಿ ತೇರ್ಗಡೆಯಾದ ನೂರಾರು ವಿದ್ಯಾರ್ಥಿಗಳು ಪದವಿ ಕೋರ್ಸ್ಗೆ ಪ್ರವೇಶ ಪಡೆಯಲು ಆಗದೆ, ಒಂದು ವರ್ಷ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿದ್ದರು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ನ.29ರಂದು ‘ಸಿಗದ ಪ್ರವೇಶ: ವಿದ್ಯಾರ್ಥಿಗಳಿಗೆ’ ತೊಂದರೆ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿ ಗಮನಸೆಳೆಯಲಾಗಿತ್ತು.</p>.<p>ಸ್ಪಂದಿಸಿದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರವೇಶದ ಅವಧಿ ವಿಸ್ತರಿಸಿದ್ದಾರೆ.</p>.<p>‘ಈ ಸಾಲಿನಲ್ಲಿ ಇದು ವಿದ್ಯಾರ್ಥಿಗಳಿಗೆ ಕೊನೆಯ ಅವಕಾಶವಾಗಿದೆ. 200–300 ವಿದ್ಯಾರ್ಥಿಗಳಿಗೆ ತೊಂದರೆ ಆಗಿದ್ದನ್ನು ಪರಿಗಣಿಸಿ, ಪ್ರವೇಶ ಅವಧಿ ವಿಸ್ತರಿಸಲಾಗಿದೆ. ಇದನ್ನು ಅವರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕುಲಪತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>