ಚಿಕ್ಕೋಡಿ ತಾಲ್ಲೂಕು ಕೇಂದ್ರವಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದ ಪ್ರದೇಶವಾಗಿದೆ. ಈ ಪಟ್ಟಣದ ಅಲ್ಲಲ್ಲಿ ಪ್ರಯಾಣಿಕರ ತಂಗುದಾಣಗಳಿಲ್ಲದಿರುವುದು ಕಳವಳಕಾರಿಯಾಗಿದೆ. ಸಾರ್ವಜನಿಕರು ನಿತ್ಯವೂ ಪರದಾಡಬೇಕಾಗಿದೆ. ಅದರಲ್ಲೂ ಮಹಿಳಯರು, ವೃದ್ಧರ ಪರದಾಟ ಹೇಳತೀರದು. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎನ್ನಬಹುದು. ಇನ್ನಾದರೂ, ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕು. ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಿಸಬೇಕು.