<p><strong>ಬೆಳಗಾವಿ: </strong>‘ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಜಿಲ್ಲೆಯ ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಮತ್ತು ಬಿಜೆಪಿ ವಿರುದ್ಧ ಮತ ಚಲಾಯಿಸಲು ಕಾಯುತ್ತಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸಿಂದಗಿಯಲ್ಲೂ ಗೆಲ್ಲುವ ನಿರೀಕ್ಷೆ ಇತ್ತು. ಏಕೆ ಸೋಲಾಯಿತು ಗೊತ್ತಿಲ್ಲ. ಹಾನಗಲ್ ನಮಗೆ ಪ್ರತಿಷ್ಠೆಯಾಗಿತ್ತು; ಅಲ್ಲಿ ಗೆದ್ದಿದ್ದೇವೆ. ಶ್ರೀನಿವಾಸ ಮಾನೆ ಅವರನ್ನು ಗೆಲ್ಲಿಸಲು ಪಕ್ಷದ ಹಿರಿಯ ನಾಯಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ದಂಡೆ ಶ್ರಮಿಸಿದೆ. ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದರಿಂದ ಗೆಲುವು ಸಾಧ್ಯವಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಾನು 15 ದಿನಗಳವರೆಗೆ ಕ್ಷೇತ್ರದಲ್ಲಿಯೇ ಇದ್ದು, ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪ್ರಚಾರ ಮಾಡಿದ್ದೆ. ಆಗ ಜನರ ಪ್ರತಿಕ್ರಿಯೆ ನೋಡಿ ಆತ್ಮವಿಶ್ವಾಸ ಮೂಡಿತ್ತು. ಸಚಿವರು ಯಾರೇ ಬರಬಹುದು; ಜನರಿಗೆ ಎಷ್ಟೇ ದುಡ್ಡು ಹಂಚಬಹುದು. ಆದರೆ, ಆಮಿಷದಿಂದ ಮತದಾರರನ್ನು ಸೆಳೆಯಲು ಆಗುವುದಿಲ್ಲ ಎನ್ನುವುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ’ ಎಂದು ವಿಶ್ಲೇಷಿಸಿದರು.</p>.<p class="Briefhead"><strong>ಮುಖ್ಯಮಂತ್ರಿಗೆ ಮುಖಭಂಗ ಎನ್ನುವುದಿಲ್ಲ: ಲಕ್ಷ್ಮಿ</strong></p>.<p>‘ಹಾನಗಲ್ ಜಿದ್ದಾಜಿದ್ದಿನ ಕ್ಷೇತ್ರವಾಗಿತ್ತು. ಪ್ರಬುದ್ಧ ಮತದಾರರು ಹೃದಯವಂತ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಕೆಲವೇ ತಿಂಗಳಾಗಿವೆ. ಅವರಿಗೆ ಮುಖಭಂಗವಾಗಿದೆ ಎನ್ನಲು ಬಯಸುವುದಿಲ್ಲ’ ಎಂದು ಕೆಪಿಸಿಸಿ ವಕ್ತಾರೆಯೂ ಅಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>‘ಕಷ್ಟ ಕಾಲದಲ್ಲಿ ಜನರಿಗೆ ಸ್ಪಂದಿಸುವವರನ್ನು ಜನರು ಕೈ ಹಿಡಿಯುತ್ತಾರೆ ಎನ್ನುವುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ. ಪ್ರಬುದ್ಧ ಮತದಾರರು ಜಾತಿ ರಾಜಕೀಯ ಮಾಡಿಲ್ಲ. ಕಷ್ಟಕಾಲದಲ್ಲಿ ಸ್ಪಂದಿಸಿದ ವ್ಯಕ್ತಿಗೆ ಮಣೆ ಹಾಕಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಹಾನಗಲ್ ಕ್ಷೇತ್ರದ ಚುನಾವಣೆ ಎಲ್ಲರಿಗೂ ಪಾಠವಾಗಿದೆ. ಬೆಲೆ ಏರಿಕೆ ಬಿಸಿ ಹಾನಗಲ್ನಲ್ಲಿ ಬಿಜೆಪಿಗೆ ತಟ್ಟಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಜಿಲ್ಲೆಯ ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಮತದಾರರು ಕಾಂಗ್ರೆಸ್ಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಮತ್ತು ಬಿಜೆಪಿ ವಿರುದ್ಧ ಮತ ಚಲಾಯಿಸಲು ಕಾಯುತ್ತಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸಿಂದಗಿಯಲ್ಲೂ ಗೆಲ್ಲುವ ನಿರೀಕ್ಷೆ ಇತ್ತು. ಏಕೆ ಸೋಲಾಯಿತು ಗೊತ್ತಿಲ್ಲ. ಹಾನಗಲ್ ನಮಗೆ ಪ್ರತಿಷ್ಠೆಯಾಗಿತ್ತು; ಅಲ್ಲಿ ಗೆದ್ದಿದ್ದೇವೆ. ಶ್ರೀನಿವಾಸ ಮಾನೆ ಅವರನ್ನು ಗೆಲ್ಲಿಸಲು ಪಕ್ಷದ ಹಿರಿಯ ನಾಯಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರ ದಂಡೆ ಶ್ರಮಿಸಿದೆ. ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದರಿಂದ ಗೆಲುವು ಸಾಧ್ಯವಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಾನು 15 ದಿನಗಳವರೆಗೆ ಕ್ಷೇತ್ರದಲ್ಲಿಯೇ ಇದ್ದು, ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪ್ರಚಾರ ಮಾಡಿದ್ದೆ. ಆಗ ಜನರ ಪ್ರತಿಕ್ರಿಯೆ ನೋಡಿ ಆತ್ಮವಿಶ್ವಾಸ ಮೂಡಿತ್ತು. ಸಚಿವರು ಯಾರೇ ಬರಬಹುದು; ಜನರಿಗೆ ಎಷ್ಟೇ ದುಡ್ಡು ಹಂಚಬಹುದು. ಆದರೆ, ಆಮಿಷದಿಂದ ಮತದಾರರನ್ನು ಸೆಳೆಯಲು ಆಗುವುದಿಲ್ಲ ಎನ್ನುವುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ’ ಎಂದು ವಿಶ್ಲೇಷಿಸಿದರು.</p>.<p class="Briefhead"><strong>ಮುಖ್ಯಮಂತ್ರಿಗೆ ಮುಖಭಂಗ ಎನ್ನುವುದಿಲ್ಲ: ಲಕ್ಷ್ಮಿ</strong></p>.<p>‘ಹಾನಗಲ್ ಜಿದ್ದಾಜಿದ್ದಿನ ಕ್ಷೇತ್ರವಾಗಿತ್ತು. ಪ್ರಬುದ್ಧ ಮತದಾರರು ಹೃದಯವಂತ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಕೆಲವೇ ತಿಂಗಳಾಗಿವೆ. ಅವರಿಗೆ ಮುಖಭಂಗವಾಗಿದೆ ಎನ್ನಲು ಬಯಸುವುದಿಲ್ಲ’ ಎಂದು ಕೆಪಿಸಿಸಿ ವಕ್ತಾರೆಯೂ ಅಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>‘ಕಷ್ಟ ಕಾಲದಲ್ಲಿ ಜನರಿಗೆ ಸ್ಪಂದಿಸುವವರನ್ನು ಜನರು ಕೈ ಹಿಡಿಯುತ್ತಾರೆ ಎನ್ನುವುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ. ಪ್ರಬುದ್ಧ ಮತದಾರರು ಜಾತಿ ರಾಜಕೀಯ ಮಾಡಿಲ್ಲ. ಕಷ್ಟಕಾಲದಲ್ಲಿ ಸ್ಪಂದಿಸಿದ ವ್ಯಕ್ತಿಗೆ ಮಣೆ ಹಾಕಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಹಾನಗಲ್ ಕ್ಷೇತ್ರದ ಚುನಾವಣೆ ಎಲ್ಲರಿಗೂ ಪಾಠವಾಗಿದೆ. ಬೆಲೆ ಏರಿಕೆ ಬಿಸಿ ಹಾನಗಲ್ನಲ್ಲಿ ಬಿಜೆಪಿಗೆ ತಟ್ಟಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>