‘ನಾನು 15 ದಿನಗಳವರೆಗೆ ಕ್ಷೇತ್ರದಲ್ಲಿಯೇ ಇದ್ದು, ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪ್ರಚಾರ ಮಾಡಿದ್ದೆ. ಆಗ ಜನರ ಪ್ರತಿಕ್ರಿಯೆ ನೋಡಿ ಆತ್ಮವಿಶ್ವಾಸ ಮೂಡಿತ್ತು. ಸಚಿವರು ಯಾರೇ ಬರಬಹುದು; ಜನರಿಗೆ ಎಷ್ಟೇ ದುಡ್ಡು ಹಂಚಬಹುದು. ಆದರೆ, ಆಮಿಷದಿಂದ ಮತದಾರರನ್ನು ಸೆಳೆಯಲು ಆಗುವುದಿಲ್ಲ ಎನ್ನುವುದನ್ನು ಈ ಚುನಾವಣೆ ತೋರಿಸಿಕೊಟ್ಟಿದೆ’ ಎಂದು ವಿಶ್ಲೇಷಿಸಿದರು.