ಇಲ್ಲಿಯವರೆಗೆ ಪರಿಹಾರಧನ ತುಂಬದ ಕಾರಣ ಸಂಬಂಧಪಟ್ಟ ನ್ಯಾಯಾಲಯದಿಂದ ಕಚೇರಿ ಜಪ್ತಿ ವಾರೆಂಟ್ ಪಡೆದುಕೊಂಡಿದ್ದು, ಆ ಪ್ರಕಾರ ಶುಕ್ರವಾರ ನ್ಯಾಯಾಲಯದ ಆದೇಶದ ಮೇರೆಗೆ ವಿಶೇಷ ಭೂಸ್ವಾಧಿನ ಕಚೇರಿ ಮತ್ತು ಎಕ್ಸಿಕ್ಯೂಟಿವ್ ಎಂಜಿನಿಯರ್ ಉಪವಿಭಾಗ ಶಾಖಾ ಕಚೇರಿಗೆ ಹೋಗಿ ಜಪ್ತು ಮಾಡಿ ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಜಮಾ ಮಾಡಲಾಯಿತು. ಈ ಸಂದರ್ಭದಲ್ಲಿ ಹುಕ್ಕೇರಿ ಕೋರ್ಟ್ ಬೇಲಿಫ್ ಬಿ.ಎಸ್. ಪಾಶ್ಚಾಪೂರ, ಬಿ.ಎಸ್. ಸದಲಗಿ ಮತ್ತು ವಕೀಲ ಎಂ.ಐ.ನಿಜಗುಣಿ ಇದ್ದರು.