ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ತಗ್ಗಿದೆ. ನಿಪ್ಪಾಣಿ ತಾಲ್ಲೂಕಿನ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ, ಭೋಜ್-ಕುನ್ನೂರ, ಬಾರವಾಡ-ಕುನ್ನೂರ ಸೇತುವೆಗಳು ಸಂಚಾರಕ್ಕೆ ಮುಕ್ತಗೊಂಡಿವೆ.
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಕೃಷ್ಣಾ ನದಿಯ ನೀರಿನ ಮಟ್ಟ ಎರಡು ಅಡಿಗಳಷ್ಟು ಕಡಿಮೆ ಆಗಿದೆ. ಸದ್ಯ ಸೇತುವೆ ಮೇಲೆ ಮುಕ್ಕಾಲು ಅಡಿಯಷ್ಟು ನೀರಿದ್ದು ಮಧ್ಯಾಹ್ನದ ನಂತರ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.