ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವೇದಿಕೆಯ ಮೇಲೆ ಬಿಇಒ ಮಹಾದೇವಿ ನಾಯಿಕ, ನಗರಸಭೆ ಮಾಜಿ ಅಧ್ಯಕ್ಷ ಜಯವಂತ ಭಾಟಲೆ, ರಾಜೇಂದ್ರ ಗುಂಡೆಶಾ, ಗೀತಾ ಪಾಟೀಲ, ಮಹಾದೇವ ಬರಗಾಲೆ, ಎಸ್.ಕೆ. ಖಜ್ಜನ್ನವರ, ಸಂತೋಷ ಸಾಂಗಾವಕರ, ಸುಭಾಷ ಕದಮ, ಸುಜಾತಾ ಕದಮ, ಕಾವೇರಿ ಮಿರ್ಜೆ, ಸುರಜ ಖವರೆ ಇದ್ದರು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಮಹಿಳಾ ಫಲಾನುಭವಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಸಿಡಿಪಿಒ ರಾಮಮೂರ್ತಿ ಕೆ.ವಿ. ಸ್ವಾಗತಿಸಿದರು.