ಬೆಳಗಾವಿ: ರಾಜ್ಯ ರೈತ ಸಂಘದಿಂದ ಜುಲೈ 5ರಂದು ಮಧ್ಯಾಹ್ನ 11ಕ್ಕೆ ಇಲ್ಲಿನ ಕೆಪಿಟಿಸಿಎಲ್ ಸಭಾಭವನದಲ್ಲಿ ಕೇಂದ್ರದ ಮಾಜಿ ಸಚಿವ ಮತ್ತು ರೈತ ನಾಯಕ ಬಾಬಾಗೌಡ ಪಾಟೀಲ ಅವರಿಗೆ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿದೆ.
ಸಂಘದ ಗೌರವಾಧ್ಯಕ್ಷ ಚಾಮರಾಜ ಮಾಲಿಪಾಟೀಲ, ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸಾಮಾಜಿಕ ಕಾರ್ಯಕರ್ತ ಎಸ್.ಆರ್. ಹಿರೇಮಠ, ಮುಖಂಡ ಶಶಿಕಾಂತ ನಾಯಿಕ ಭಾಗವಹಿಸುವರು ಎಂದು ಮುಖಂಡ ಕಲ್ಯಾಣರಾವ ಮುಚಳಂಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.