<p><strong>ಬೆಳಗಾವಿ</strong>: ವಕ್ಫ್ ಮಂಡಳಿಯ ಹಕ್ಕು ಮತ್ತು ಸ್ವಾತಂತ್ರ್ಯ ಮೊಟಕುಗೊಳಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p><p>ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ‘ಮುಸ್ಲಿಮರಿಗೆ ಮಾರಕವಾಗಿರುವ ಈ ಕಾಯ್ದೆಯನ್ನು ನಾವು ಎಂದಿಗೂ ಒಪ್ಪುವುದಿಲ್ಲ. ಇದನ್ನು ರದ್ದುಪಡಿಸುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದರು.</p><p>‘ವಕ್ಫ್ ಮಂಡಳಿಯಲ್ಲಿ ಬದಲಾವಣೆ ತರಲು ಎನ್ಡಿಎ ನೇತೃತ್ವದ ಸರ್ಕಾರ ಕರಾಳವಾದ ಕಾಯ್ದೆ ಜಾರಿಗೊಳಿಸುತ್ತಿದೆ. ಈ ಹಿಂದೆ ವಕ್ಫ್ ಮಂಡಳಿ ಆಸ್ತಿ ಕಬಳಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕಾನೂನು ಇತ್ತು. ಈಗ ಅದನ್ನು ರದ್ದುಪಡಿಸಲಾಗುತ್ತಿದೆ. ಯಾರಾದರೂ ವಕ್ಫ್ ಮಂಡಳಿ ಆಸ್ತಿಗೆ ಕನ್ನ ಹಾಕಲು ಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p><p>ಮುಖಂಡರಾದ ಮಕ್ಸೂದ್ ಮಕಾನದಾರ, ಇಮ್ರಾನ್ ಅತ್ತಾರ್, ಮಜೀದ್ ಶೇಖ್, ಇಸ್ಮಾಯಿಲ್ ವಣ್ಣೂರ, ಮೌಝಮ್ಜಾ ಮುಲ್ಲಾನಿ ಪ್ರತಿಭಟನೆ ನೇತೃತ್ವ ವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ವಕ್ಫ್ ಮಂಡಳಿಯ ಹಕ್ಕು ಮತ್ತು ಸ್ವಾತಂತ್ರ್ಯ ಮೊಟಕುಗೊಳಿಸಲು ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ವಕ್ಫ್ ತಿದ್ದುಪಡಿ ಕಾಯ್ದೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p><p>ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಕಾರರು, ‘ಮುಸ್ಲಿಮರಿಗೆ ಮಾರಕವಾಗಿರುವ ಈ ಕಾಯ್ದೆಯನ್ನು ನಾವು ಎಂದಿಗೂ ಒಪ್ಪುವುದಿಲ್ಲ. ಇದನ್ನು ರದ್ದುಪಡಿಸುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದರು. ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದರು.</p><p>‘ವಕ್ಫ್ ಮಂಡಳಿಯಲ್ಲಿ ಬದಲಾವಣೆ ತರಲು ಎನ್ಡಿಎ ನೇತೃತ್ವದ ಸರ್ಕಾರ ಕರಾಳವಾದ ಕಾಯ್ದೆ ಜಾರಿಗೊಳಿಸುತ್ತಿದೆ. ಈ ಹಿಂದೆ ವಕ್ಫ್ ಮಂಡಳಿ ಆಸ್ತಿ ಕಬಳಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಕಾನೂನು ಇತ್ತು. ಈಗ ಅದನ್ನು ರದ್ದುಪಡಿಸಲಾಗುತ್ತಿದೆ. ಯಾರಾದರೂ ವಕ್ಫ್ ಮಂಡಳಿ ಆಸ್ತಿಗೆ ಕನ್ನ ಹಾಕಲು ಯತ್ನಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.</p><p>ಮುಖಂಡರಾದ ಮಕ್ಸೂದ್ ಮಕಾನದಾರ, ಇಮ್ರಾನ್ ಅತ್ತಾರ್, ಮಜೀದ್ ಶೇಖ್, ಇಸ್ಮಾಯಿಲ್ ವಣ್ಣೂರ, ಮೌಝಮ್ಜಾ ಮುಲ್ಲಾನಿ ಪ್ರತಿಭಟನೆ ನೇತೃತ್ವ ವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>