ಅಥಣಿ: ‘ಅಥಣಿ ಮತ್ತು ಕಾಗವಾಡ ಕ್ಷೇತ್ರದಾದ್ಯಂತ ₹ 290 ಕೋಟಿ ಅನುದಾನದಲ್ಲಿ ಹತ್ತು ಹಲವು ಕಾಮಗಾರಿಗಳು ಚಾಲನೆಯಲ್ಲಿವೆ. ಅದನ್ನು ನೋಡಿದರೆ ಖುಷಿಯಾಗುತ್ತದೆ’ ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು.
ತಾಲ್ಲೂಕು ಆಡಳಿತದಿಂದ ಭಾನುವಾರ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಮುಂದೆಯೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೊಂದಿಗೆ ಸೇರಿ ತಾಲ್ಲೂಕನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದರು.
‘ಪ್ರವಾಹದಿಂದಾಗಿ 26 ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿ ಸಾಕಷ್ಟು ತೊಂದರೆಯಾಗಿದೆ. ಕಳೆದ ಮಾರ್ಚ್ನಲ್ಲಿ ಬರಗಾಲ ಎದುರಿಸಿದ್ದ ತಾಲ್ಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಸರ್ಕಾರ ಸ್ಪಂದಿಸಿದೆ. ಇನ್ನೂ ಸ್ವಲ್ಪ ಹಣ ಬಿಡುಗಡೆಯಾಗುವುದು ಬಾಕಿ ಇದ್ದು, ಶೀಘ್ರದಲ್ಲೇ ದೊರೆಯಲಿದೆ’ ಎಂದು ತಿಳಿಸಿದರು.