ಪಕ್ಷದ ಕಿಸಾನ್ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸುರೇಂದ್ರ ತವಲಕರ ಮಾತನಾಡಿ, ‘ಮಹಾರಾಷ್ಟ್ರದ ಗಡಿಭಾಗದಲ್ಲಿರುವತಾಲ್ಲೂಕಿನ ಸುಕ್ಷೇತ್ರ ಮಂಗಸೂಳಿಯ ಮಲ್ಲಯ್ಯ ದೇವಸ್ಥಾನಕ್ಕೆ ಪ್ರತಿದಿನ ನೂರಾರು ಭಕ್ತರು ಆಗಮಿಸುತ್ತಾರೆ. ಆದರೆ, ದೇವಸ್ಥಾನಕ್ಕೆ ಸಮರ್ಪಕ ಬಸ್ ಸೌಕರ್ಯ ಇಲ್ಲದಿರುವುದರಿಂದ ಭಕ್ತರಿಗೆ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ, ಅಥಣಿಯಿಂದ ಮಂಗಸೂಳಿ ಮಾರ್ಗವಾಗಿ ಶೇಡಬಾಳ ರೈಲ್ವೆ ನಿಲ್ದಾಣಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.